ಬೆಂಗಳೂರು : ಮಾರ್ಚ್ 4 ರಂದು ರಾಜ್ಯ ವಿಧಾನಮಂಡಲ ಅಧಿವೇಶನದ ಮೊದಲ ಎರಡು ದಿನ ʼಒಂದು ರಾಜ್ಯ ಒಂದು ಚುನಾವಣೆʼ ಕುರಿತು ಚರ್ಚೆ ನಡೆಯಲಿದೆ.
ರಾಜ್ಯ ವಿಧಾನಮಂಡಲ ಅಧಿವೇಶನ ಮಾರ್ಚ್ 4 ರಿಂದ 19 ದಿನ ನಡೆಯಲಿದ್ದು ಈ ನಡುವೆ ಮಾರ್ಚ್ 8 ರಂದು ಬಜೆಟ್ ಮಂಡನೆಯಾಗಲಿದೆ.
ʼಗುಜರಾತ್ನ ಕೆವಾಡಿಯಾದಲ್ಲಿ ನಡೆದಿದ್ದ ಸ್ಪೀಕರ್ಗಳ ಸಮ್ಮೇಳನದ ನಿರ್ಣಯದಂತೆ ʼ ಒಂದು ರಾಷ್ಟ್ರ – ಒಂದು ಚುನಾವಣೆʼ ಕುರಿತು ಚರ್ಚಿಸಲು ಸಮಯ ನಿಗದಿ ಮಾಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ಬಗ್ಗೆ ವಿಧಾನಪರಿಷತ್ತಿನಲ್ಲೂ ಎರಡು ದಿನಗಳ ಚರ್ಚೆ ನಡೆಯಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಕೋವಿಡ್ ಕಾರಣದಿಂದಾಗಿ ವಿಧಿಸಲಾಗಿದ್ದ ಸಾರ್ವಜನಿಕ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸಿದ್ದು. ಈ ಅಧಿವೇಶನದಲ್ಲಿ ಕೊರೋನಾ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.