ನವದೆಹಲಿ: ಶಿಕ್ಷಣವನ್ನು ಉದ್ಯೋಗ ಮತ್ತು ಉದ್ಯಮಶೀಲತೆಯ ಸಾಮರ್ಥ್ಯದೊಂದಿಗೆ ಜೋಡಿಸುವ ಸರ್ಕಾರದ ಪ್ರಯತ್ನಗಳನ್ನು ಕೇಂದ್ರ ಬಜೆಟ್ ವಿಸ್ತರಿಸಿದೆ. ಈ ವರ್ಷದ ಬಜೆಟ್ನಲ್ಲಿ ಆರೋಗ್ಯದ ನಂತರದ ಎರಡನೇ ಅತಿದೊಡ್ಡ ಗಮನ ಶಿಕ್ಷಣ, ಕೌಶಲ್ಯ, ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ
ಶಿಕ್ಷಣ ಕ್ಷೇತ್ರದಲ್ಲಿ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದ ವೆಬ್ನಾರ್ ಅನ್ನುದ್ದೇಶಿಸಿ ಮಾತನಾಡಿದ ಮೋದಿ, ಆತ್ಮನಿರ್ಭರ ಭಾರತವನ್ನು ನಿರ್ಮಿಸುವಂತೆ ಕರೆ ನೀಡಿದರು. ದೇಶದ ಯುವಕರಿಗೆ ಆತ್ಮವಿಶ್ವಾಸದ ಅಗತ್ಯವಿದೆ, ಅದು ಅವರ ಶಿಕ್ಷಣ, ಜ್ಞಾನ ಮತ್ತು ಕೌಶಲ್ಯದೊಂದಿಗೆ ನೇರವಾಗಿ ಸಂಪರ್ಕ ಹೊಂದಿದೆ. ಈ ಪ್ರಮುಖ ಚಿಂತನೆಯೊಂದಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ, ಭಾರತೀಯ ಭಾಷೆಗಳ ಬಳಕೆಯನ್ನು ಪ್ರೋತ್ಸಾಹಿಸಲಾಗಿದೆ ಮತ್ತು ವಿಶ್ವದ ಅತ್ಯುತ್ತಮ ವಿಷಯವನ್ನು ಭಾರತೀಯ ಭಾಷೆಗಳಲ್ಲಿ ಹೇಗೆ ಲಭ್ಯವಾಗಿಸಬೇಕು ಎಂಬುದು ಪ್ರತಿ ಭಾಷೆಯ ತಜ್ಞರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಜ್ಞಾನ ಮತ್ತು ಸಂಶೋಧನೆಯನ್ನು ಮಿತಿಯಲ್ಲಿ ಇಡುವುದು ರಾಷ್ಟ್ರಕ್ಕೆ ಮಾಡುವ ಅನ್ಯಾಯವಾಗಿದೆ. ಇದಕ್ಕಾಗಿ ಸರ್ಕಾರವು ಯುವಜನರಿಗೆ ಕೃಷಿ, ಬಾಹ್ಯಾಕಾಶ, ಪರಮಾಣು ಶಕ್ತಿ ಮತ್ತು ಡಿಆರ್ಡಿಒ ಮುಂತಾದ ಹಲವಾರು ಕ್ಷೇತ್ರಗಳನ್ನು ತೆರೆಯುತ್ತಿದೆ. ಭಾರತವು ಹೈಡ್ರೋಜನ್ ವಾಹನವನ್ನು ಪರೀಕ್ಷಿಸಿದೆ ಮತ್ತು ಈಗ ದೇಶವು ಹೈಡ್ರೋಜನ್ ಅನ್ನು ಸಾರಿಗೆಗೆ ಇಂಧನವಾಗಿ ಬಳಸಿಕೊಳ್ಳಲು ಉದ್ಯಮ-ಸಿದ್ಧವಾಗಬೇಕಿದೆ ಎಂದು ಅವರು ಹೇಳಿದರು.
ಇಂಧನ ಕ್ಷೇತ್ರದಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಭವಿಷ್ಯದ ಇಂಧನ ಮತ್ತು ಹಸಿರು ಶಕ್ತಿ ಬಹಳ ಮುಖ್ಯ. ಹೀಗಾಗಿ, ಬಜೆಟ್ನಲ್ಲಿ ಘೋಷಿಸಲಾದ ಹೈಡ್ರೋಜನ್ ಮಿಷನ್ ಒಂದು ಬೃಹತ್ ಯೋಜನೆಯಾಗಿದೆ ಎಂದು ಅವರು ಹೇಳಿದರು..
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.