ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬಡವರನ್ನು ಸರ್ಕಾರ ಗುರುತಿಸಿ ನೀಡುವ ಬಿಪಿಎಲ್ ಕಾರ್ಡ್, ಆರ್ಥಿಕವಾಗಿ ಸಶಕ್ತವುಳ್ಳವರ ಪಾಲಾಗುತ್ತಿದೆ. ಈ ವಿಚಾರದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅನರ್ಹರನ್ನು ಗುರುತಿಸಿ ಕ್ರಮ ಕೈಗೊಳ್ಳಲು ಚಾಣಕ್ಯ ತಂತ್ರದ ಮೂಲಕ ಮುಂದಾಗಿದೆ.
ಸರ್ಕಾರ ಅನುದಾನ ಪಡೆಯುವ ಸಿಬ್ಬಂದಿ, ಸರ್ಕಾರಿ ಸಂಸ್ಥೆಗಳಲ್ಲಿ ಉನ್ನತ ಹುದ್ದೆಯಲ್ಲಿರುವವರು, ಅಧಿಕಾರಿಗಳು, ಸರ್ಕಾರಿ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಜಮೀನುದಾರರು, ಹೆಚ್ಚು ಹಣ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು, ನಾಲ್ಕು ಚಕ್ರದ ವಾಹನ ಇರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.1.20 ಲಕ್ಷಕ್ಕಿಂತಲೂ ಹೆಚ್ಚು ಆದಾಯ ಪಡೆದುಕೊಳ್ಳುವ ಕುಟುಂಬಗಳು ಈ ಬಿಪಿಎಲ್ ಕಾರ್ಡ್ ಹೊಂದಿರುವುದಾದರೆ ಅವರು ಸರ್ಕಾರದ ನಿಯಮ ಪ್ರಕಾರ ಅನರ್ಹ ಹಕ್ಕುದಾರರಾಗುತ್ತಾರೆ. ಈ ರೀತಿಯಾಗಿ ಯಾರು ಕಾರ್ಡ್ ಹೊಂದಿದ್ದಾರೋ ಅವರು ಸ್ವಯಂ ಪ್ರೇರಿತರಾಗಿ ಹಿಂದಿರುಗಿಸುವಂತೆ ಇಲಾಖೆಯು ಮನವಿ ಮಾಡಿದೆ. ಮತ್ತು ಯಾರೆಲ್ಲಾ ಅನರ್ಹವಾಗಿ ಕಾರ್ಡ್ ಹೊಂದಿರುವರೋ ಅವರ ಬಗ್ಗೆ ಸರ್ಕಾರ ಈಗಾಗಲೇ ಮಾಹಿತಿ ಕಲೆ ಹಾಕಿದೆ.
ಸರ್ಕಾರ ಈ ಬಗ್ಗೆ ಇನಷ್ಟು ಮುಂದೆ ಬಂದು ಈ ರೀತಿಯಾಗಿ ಯಾರು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದಾರೋ ಅಂತವರನ್ನು ಗುರುತಿಸಿ ಮಾಹಿತಿ ನೀಡಿದವರಿಗೆ ರೂ. 400 ಅನ್ನು ಬಹುಮಾನವಾಗಿ ನೀಡುವುದೆಂದು ಘೋಷಿಸಿದೆ.
ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರು ಮಾರ್ಚ್ ಅಂತ್ಯದೊಳಗಾಗಿ ಕಾರ್ಡ್’ಗಳನ್ನು ಮರಳಿಸುವಂತೆ ಕಾಲಾವಕಾಶವನ್ನೂ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.