ನವದೆಹಲಿ: ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ನಿರ್ಣಯವನ್ನು ಕೈಗೊಂಡ ಮತ್ತು ಅದನ್ನು ಸಹ-ಪ್ರಾಯೋಜಿಸಿದ ಎಲ್ಲ ರಾಷ್ಟ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸಿರಿಧಾನ್ಯಗಳನ್ನು ಜನಪ್ರಿಯಗೊಳಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂಬುದು ಗೌರವದ ವಿಷಯ, ಸಿರಿಧಾನ್ಯಗಳ ಸೇವನೆಯು ಪೋಷಣೆ, ಆಹಾರ ಸುರಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ರೈತರ ಕಲ್ಯಾಣಕ್ಕೆ ಪೂರಕವಾಗಿದೆ ಎಂದು ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದು ಕೃಷಿ ವಿಜ್ಞಾನಿಗಳು ಮತ್ತು ಪ್ರಾರಂಭಿಕ ಸಮುದಾಯಗಳಿಗೆ ಸಂಶೋಧನೆ ಮತ್ತು ನಾವೀನ್ಯತೆಯ ಅವಕಾಶಗಳನ್ನು ಸಹ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2023 ರ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷಾಚರಣೆ ಭಾರತ ಪ್ರಾಯೋಜಿತವಾಗಲಿದೆ ಎಂಬ ನಿರ್ಣಯವನ್ನು ಒಮ್ಮತದಿಂದ ನಿನ್ನೆ ಅಂಗೀಕರಿಸಲಾಯಿತು.
ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಎಲ್ಲಾ ಸಹ-ಪ್ರಾಯೋಜಕರಿಗೆ ವಿಶೇಷವಾಗಿ ಬಾಂಗ್ಲಾದೇಶ, ಕೀನ್ಯಾ, ನೇಪಾಳ, ನೈಜೀರಿಯಾ, ರಷ್ಯಾ ಮತ್ತು ಸೆನೆಗಲ್ ಮತ್ತು ಯುಎನ್ ನ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಬೆಂಬಲ ನೀಡಿದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.
Gratitude to all the nations who initiated and co-sponsored the resolution on International Year of Millets at the @UN.
Distinguished delegates were also served delicious Millet Murukku! This is one snack I also relish and urge all of you to try it as well. pic.twitter.com/j84PyWN5l5
— Narendra Modi (@narendramodi) March 4, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.