ತಿರುವನಂತಪುರಂ: ‘ಮೆಟ್ರೋ ಮ್ಯಾನ್’ ಎಂದು ಜನಪ್ರಿಯವಾಗಿರುವ ಇ ಶ್ರೀಧರನ್ ಅವರು ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ. ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಶ್ರೀಧರನ್ ಕಳೆದ ವಾರ ಬಿಜೆಪಿಗೆ ಸೇರಿದ್ದರು. ಪಕ್ಷಕ್ಕೆ ಸೇರ್ಪಡೆಗೊಳ್ಳುವಾಗ ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆಯನ್ನೂ ವ್ಯಕ್ತಪಡಿಸಿದ್ದರು. “ಜನರಿಗೆ ಯಾವುದು ಒಳ್ಳೆಯದು ಮತ್ತು ರಾಜ್ಯಕ್ಕೆ ಯಾವುದು ಒಳ್ಳೆಯದು ಎಂದು ಜನರಿಗೆ ಚೆನ್ನಾಗಿ ತಿಳಿದಿದೆ. ಅವರು ಬಿಜೆಪಿಯನ್ನು ಅಧಿಕಾರಕ್ಕೆ ಆಯ್ಕೆ ಮಾಡುತ್ತಾರೆ ಎಂದು ನನಗೆ ವಿಶ್ವಾಸವಿದೆ. ನಾನು ದೊಡ್ಡ ವಿಜಯವನ್ನು ನಿರೀಕ್ಷಿಸುತ್ತಿದ್ದೇನೆ” ಎಂದು ಅವರು ಹೇಳಿದ್ದರು.
“ನಾನು ಈಗ ವಾಸಿಸುತ್ತಿರುವ ಪೊನ್ನಾನಿಯಿಂದ ದೂರದಲ್ಲಿರುವ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸುತ್ತೇನೆ ಎಂದು ನಾನು ಬಿಜೆಪಿಗೆ ಮನವಿಯನ್ನು ಮಾಡಿದ್ದೇನೆ” ಎಂದು ಅವರು ಹೇಳಿದರು.
“ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ” ಎಂದಿದ್ದಾರೆ.
“ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿ ಮಾಡಬಹುದು ಮತ್ತು ಬಿಜೆಪಿಗೆ ಸೇರುವ ಮೂಲಕ ಅದನ್ನು ಮಾಡಲು ನಾನು ಆಶಿಸುತ್ತೇನೆ. ಕೇರಳದ ಇತರ ರಾಜಕೀಯ ಪಕ್ಷಗಳು ಆಯಾ ಪಕ್ಷಗಳ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿವೆ, ಕೇರಳಕ್ಕೆ ಯಾವುದೇ ಒಳ್ಳೆಯದನ್ನು ಮಾಡಲು ವಿಫಲವಾಗಿವೆ” ಎಂದು ಶ್ರೀಧರನ್ ಈ ಹಿಂದೆ ಹೇಳಿದ್ದರು.
140 ಸದಸ್ಯರ ಕೇರಳ ವಿಧಾನಸಭೆಯ ಚುನಾವಣೆ ಏಪ್ರಿಲ್ 6 ರಂದು ನಡೆಯಲಿದೆ. ಕೇರಳದ ಮತಗಟ್ಟೆಗಳ ಸಂಖ್ಯೆಯನ್ನು 21,498 ರಿಂದ 40,771 ಕ್ಕೆ ವಿಸ್ತರಿಸಲಾಗಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.