ಬೆಂಗಳೂರು: ಭಾವಗೀತೆಗಳ ರಚನೆಯಲ್ಲಿ ಅಮೂಲ್ಯ ಸಾಧನೆ ಮಾಡಿದ್ದ ಪ್ರಖ್ಯಾತ ಕವಿ ಎನ್ ಎಸ್ ಲಕ್ಷ್ಮೀನಾರಾಯಣ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ.
ಅಕ್ಷರಗಳ ಮೂಲಕ ಭಾವಗೀತೆಗಳನ್ನು ಸುಂದರವಾಗಿ ಕಟ್ಟಿಕೊಟ್ಟ ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ ಅವರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯ ಕವಿತೆ, ಮಕ್ಕಳ ಗೀತೆ ರಚನೆ ಮೊದಲಾದ ಸಾಹಿತ್ಯಗಳನ್ನು ಬರೆದು ಪ್ರಸಿದ್ದಿ ಪಡೆದಿದ್ದರು.
ಎನ್ ಎಸ್ ಲಕ್ಷ್ಮೀನಾರಾಯಣ್ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಲೋಕದ ತಾರೆಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬವರ್ಗ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ತಿಳಿಸಿದ್ದಾರೆ.
ಖ್ಯಾತ ಕವಿ ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿ ಕನ್ನಡಿಗರ ಮನೆ ಮಾತಾಗಿದ್ದರು. (1/2)
— CM of Karnataka (@CMofKarnataka) March 6, 2021
ಉಪಮುಖ್ಯಮಂತ್ರಿಗಳಾದ ಡಾ. ಅಶ್ವತ್ಥ್ ನಾರಾಯಣ, ಸಚಿವ ಶ್ರೀರಾಮುಲು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಖ್ಯಾತ ಸಾಹಿತಿ ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರ ಅಗಲಿಕೆಯ ಸುದ್ದಿ ನೋವು ತಂದಿದೆ.
ತಮ್ಮ ಭಾವಗೀತೆಗಳ ಮೂಲಕ ನಾಡಿನ ಜನಮನ ತಲುಪಿದ 'ಎನ್ನೆಸ್ಸೆಲ್' ಅವರಿಗೆ ನನ್ನ ಭಾವಪೂರ್ಣ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ pic.twitter.com/MRqpRDgoLw
— Dr. Ashwathnarayan C. N. (@drashwathcn) March 6, 2021
ಭಾವಗೀತೆ, ಮಕ್ಕಳ ಸಾಹಿತ್ಯ, ಅನುವಾದ, ಸಾಹಿತ್ಯ ವಿಮರ್ಶೆ ಸೇರಿ ಕನ್ನಡ ಸಾಹಿತ್ಯ ಲೋಕಕ್ಕೆ ಹಲವು ರೀತಿಯಲ್ಲಿ ಕೊಡುಗೆ ನೀಡಿದ ಶ್ರೀ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ಅಗಲಿಕೆಯ ಸುದ್ದಿಯು ಮನಸ್ಸಿಗೆ ಘಾಸಿ ತಂದಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/QeRUcfDyZB— B Sriramulu (@sriramulubjp) March 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.