ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಎಐಎಡಿಎಂಕೆ ತನ್ನ ಮಿತ್ರ ಪಕ್ಷವಾದ ಬಿಜೆಪಿಗೆ 20 ಸ್ಥಾನಗಳನ್ನು ಶುಕ್ರವಾರ ನೀಡಿದೆ. ಇತರ ಪ್ರಾದೇಶಿಕ ಮಿತ್ರ ಪಕ್ಷ ಪಿಎಂಕೆಗೆ 23 ಸ್ಥಾನಗಳನ್ನು ನೀಡಲಾಗಿದೆ. ಬಿಜೆಪಿಗೆ ನೀಡಲಾದ ಕ್ಷೇತ್ರಗಳ ಹೆಸರು ಇನ್ನೂ ಬಹಿರಂಗಪಡಿಸಲಾಗಿಲ್ಲ.
ಕಾಂಗ್ರೆಸ್ ಸಂಸದ ವಸಂತಕುಮಾರ್ ಅವರ ನಿಧನದ ಹಿನ್ನೆಲೆ ಉಪಚುನಾವಣೆ ಎದುರಿಸಲಿರುವ ಕನ್ಯಾಕುಮಾರಿ ಲೋಕಸಭಾ ಸ್ಥಾನವನ್ನು ಬಿಜೆಪಿಗೆ ನೀಡಲಾಗಿದೆ.
ನಿನ್ನೆ ರಾತ್ರಿ ಈ ಬಗೆಗಿನ ಮಾತುಕತೆಗೆ ಮುಖ್ಯಮಂತ್ರಿ ಎಡಪಡ್ಡಿ ಪಳನಿಸ್ವಾಮಿ, ಉಪಮುಖ್ಯಮಂತ್ರಿ ಒ. ಪನ್ನರ್ಸೆಲ್ವಂ, ಬಿಜೆಪಿ ರಾಜ್ಯ ಉಸ್ತುವಾರಿ ಸಿಟಿ ರವಿ ಮತ್ತು ಅದರ ರಾಜ್ಯ ಘಟಕದ ಮುಖ್ಯಸ್ಥ ಎಲ್. ಮುರುಗನ್ ಅಧಿಕೃತ ಸಹಿ ಹಾಕಿದ್ದಾರೆ.
ನಟ ವಿಜಯಕಾಂತ್ ಅವರ ಡಿಎಂಡಿಕೆ ಜೊತೆ ಸೀಟು ಹಂಚಿಕೆಯನ್ನು ಎಐಎಡಿಎಂಕೆ ಇನ್ನೂ ಅಂತಿಮಗೊಳಿಸಿಲ್ಲ.
ಶುಕ್ರವಾರ, ಎಐಎಡಿಎಂಕೆ ತನ್ನ ಆರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತು, ಇದರಲ್ಲಿ ಪಳನಿಸ್ವಾಮಿ ಮತ್ತು ಪನ್ನೀರ್ಸೆಲ್ವಂ ಸೇರಿದಂತೆ ಉನ್ನತ ನಾಯಕರು ಸೇರಿದ್ದಾರೆ.
ಏಪ್ರಿಲ್ 6 ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.