ನವದೆಹಲಿ: ಪ್ರಮುಖ ಜಾಗತಿಕ ಸಂಸ್ಥೆಗಳ ಸಹಯೋಗದೊಂದಿಗೆ ಭಾರತವು ಹೊರತಂದಿರುವ ಕೋವಿಡ್-19 ಲಸಿಕೆಗಳು ಮಾರಣಾಂತಿಕ ಕರೋನವೈರಸ್ನಿಂದ ಜಗತ್ತನ್ನು ರಕ್ಷಿಸಿದೆ. ಈ ವಿಷಯದಲ್ಲಿ ಭಾರತದ ಕೊಡುಗೆಗಳನ್ನು ಕಡಿಮೆ ಎಂದು ಭಾವಿಸಲು ಸಾಧ್ಯವೇ ಇಲ್ಲ ಎಂದು ಅಮೆರಿಕದ ಉನ್ನತ ವಿಜ್ಞಾನಿಯೊಬ್ಬರು ಹೇಳಿದ್ದಾರೆ.
ಹೂಸ್ಟನ್ನ ಬೇಲರ್ ಕಾಲೇಜ್ ಆಫ್ ಮೆಡಿಸಿನ್ನ ನ್ಯಾಷನಲ್ ಸ್ಕೂಲ್ ಆಫ್ ಟ್ರಾಪಿಕಲ್ ಮೆಡಿಸಿನ್ನ ಡೀನ್ ಡಾ. ಪೀಟರ್ ಹೊಟೆಜ್ ಅವರು ವೆಬ್ನಾರ್ನಲ್ಲಿ ಮಾತನಾಡಿ, ಕೋವಿಡ್-19 ಲಸಿಕೆ ಅಭಿಯಾನ ವೈರಸ್ ವಿರುದ್ಧ ಹೋರಾಡುವಲ್ಲಿ ಜಗತ್ತಿಗೆ ಭಾರತ ನೀಡಿದ ಕೊಡುಗೆಯಾಗಿದೆ ಎಂದಿದ್ದಾರೆ.
ನಿರ್ಲಕ್ಷಿತ ಸಾಂಕ್ರಾಮಿಕ ಕಾಯಿಲೆಗಳು ಮತ್ತು ಲಸಿಕೆ ಅಭಿವೃದ್ಧಿಯಲ್ಲಿ ಡಾ.ಹೋಟೆಜ್ ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ವೈದ್ಯ-ವಿಜ್ಞಾನಿಯಾಗಿದ್ದಾರೆ. ಜಾಗತಿಕ ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಭಾರತದ ದೊಡ್ಡ ಪ್ರಯತ್ನಗಳು ಜಗತ್ತಿನಲ್ಲಿ ನಿಜವಾಗಿಯೂ ಎಳೆಮರೆ ಕಾಯಿಯಂತ ಕಥೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.
ಭಾರತದ ಔಷಧ ನಿಯಂತ್ರಕವು ಪುಣೆ ಮೂಲದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನಿರ್ಮಿಸಿದ ಕೋವಿಶೀಲ್ಡ್ ಮತ್ತು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ವಿಜ್ಞಾನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸಿದ ಕೋವಾಕ್ಸಿನ್ಗೆ ತುರ್ತು ಬಳಕೆಯ ಅಧಿಕಾರವನ್ನು ನೀಡಿದೆ.
ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರತವನ್ನು ವಿಶ್ವದ ಔಷಧಾಲಯ ಎಂದು ಕರೆಯಲಾಗುತ್ತದೆ, ಲಸಿಕೆಯ ಅಪಾರ ಅನುಭವ ಮತ್ತು ಔಷಧದಲ್ಲಿ ಆಳವಾದ ಜ್ಞಾನವನ್ನು ಭಾರತ ಹೊಂದಿದೆ. ದೇಶವು ವಿಶ್ವದ ಅತಿದೊಡ್ಡ ಔಷಧ ತಯಾರಕರಲ್ಲಿ ಒಂದಾಗಿದೆ ಮತ್ತು ಅನೇಕ ದೇಶಗಳು ಈಗಾಗಲೇ ಕರೋನವೈರಸ್ ಲಸಿಕೆಗಳನ್ನು ಪಡೆಯಲು ಭಾರತವನ್ನು ಸಂಪರ್ಕಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.