ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯನ್ನು ಆಚರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
“ಈ ವರ್ಷದ 75 ನೇ ಸ್ವಾತಂತ್ರ್ಯ ದಿನಾಚರಣೆಯು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯನ್ನು ಆಚರಿಸುತ್ತದೆ ಮತ್ತು ತ್ಯಾಗದ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಇದರಲ್ಲಿ, ದೇಶದ ಹುತಾತ್ಮರಿಗೆ ಗೌರವ ಮತ್ತು ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪ ಇರಲಿದೆ. ಇದು ಸನಾತನ ಭಾರತದ ಹೆಮ್ಮೆಯ ನೋಟ ಮತ್ತು ಆಧುನಿಕ ಭಾರತದ ಹೊಳಪನ್ನು ಹೊಂದಿರುತ್ತದೆ ”ಎಂದು ಪ್ರಧಾನಿ ಮೋದಿ 75 ವರ್ಷಗಳ ಭಾರತ ಸ್ವಾತಂತ್ರ್ಯವನ್ನು ಸ್ಮರಿಸುವ ಸಲುವಾಗಿ ರಚಿಸಲಾದ ಸಮಿತಿಯ ಸಭೆಯಲ್ಲಿ ತಿಳಿಸಿದ್ದಾರೆ.
“ನಾವು 75 ವರ್ಷಗಳ ಸ್ವಾತಂತ್ರ್ಯದ ಹಬ್ಬವನ್ನು ಆಚರಿಸಬೇಕಾಗಿದೆ ಮತ್ತು ಈ ವೇಲೆ 130 ಕೋಟಿ ದೇಶವಾಸಿಗಳನ್ನು ನಮ್ಮೊಂದಿಗೆ ಕರೆದೊಯ್ಯುತ್ತೇವೆ. ಸಾರ್ವಜನಿಕ ಭಾಗವಹಿಸುವಿಕೆಯು ಈ ಕಾರ್ಯದ ಮೂಲ ಮನೋಭಾವವಾಗಿದೆ ”ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಭಾರತದ 75 ವರ್ಷಗಳ ಸ್ವಾತಂತ್ರ್ಯದ ಸ್ಮರಣಾರ್ಥ ಮೊದಲ ಸಭೆಯನ್ನು ‘ಆಜಾದಿ ಕಾ ಅಮೃತ್ ಮಹೋತ್ಸವ್’ ಶೀರ್ಷಿಕೆಯೊಂದಿಗೆ ನಡೆಸಿತು.
ಭಾರತ ಈ ವರ್ಷ ತನ್ನ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ.
ಜನವರಿ 31 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ 2021 ರ ಮೊದಲ ಮನ್ ಕಿ ಬಾತ್ನಲ್ಲಿ ದೇಶವಾಸಿಗಳಿಗೆ, ಈ ವರ್ಷದ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುತಿಸುವ ಸಂದರ್ಭ ಹೋರಾಟಗಾರರ ಬಗ್ಗೆ ಮತ್ತು ಅವರ ಹೋರಾಟದ ಕಥೆಗಳ ಬಗ್ಗೆ ಬರೆಯುವಂತೆ ಮನವಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.