ನವದೆಹಲಿ: ಐಎಂಎಫ್ ನ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ಭಾರತದ ಕೋವಿಡ್ ಲಸಿಕೆ ನೀತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.
ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಮುಂಚೂಣಿಯಲ್ಲಿ ನಿಂತುಕೊಂಡು ಕಾರ್ಯನಿರ್ವಹಿಸಿದೆ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವಾರು ರಾಷ್ಟ್ರಗಳಿಗೆ ಉಚಿತ ಲಸಿಕೆಗಳನ್ನುಕೊಡುವುದರ ಜೊತೆಗೆ ಬೇಡಿಕೆಗೆ ತಕ್ಕಂತೆ ಲಸಿಕೆ ನೀಡುತ್ತಾ ಜಗತ್ತಿಗೆ ನೆರವಾಗುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ ಎಂದು ಶ್ಲಾಘಿಸಿದ್ದಾರೆ.
ಗೋಪಿನಾಥ್ ಅವರು ಪುಣೆ ಮೂಲದ ಸೀರಮ್ ಇನ್ ಸ್ಟ್ಯೂಟ್ ಆಫ್ ಇಂಡಿಯಾ( ಎಸ್ಐಐ)ದ ಸಾಧನೆಯನ್ನು ಹೊಗಳಿದ್ದಾರೆ,
ಸೀಮಿತ ಅವಧಿಯಲ್ಲಿ ವಿಶ್ವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಗಳನ್ನು ಉತ್ಪಾದಿಸಿ ಜಗತ್ತು ಸಾಂಕ್ರಾಮಿಕ ಹೋರಾಟದ ವಿರುದ್ಧ ಹೋರಾಡುವಲ್ಲಿ ಸಂಸ್ಥೆಯ ಪ್ರಧಾನ ಪಾತ್ರವಿದೆ ಎಂದಿದ್ದಾರೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ.ಹನ್ಸ ಮೆಹ್ತಾ ಉಪನ್ಯಾಸದ ಸಂದರ್ಭದಲ್ಲಿ ಸಂವಾದಾತ್ಮಕ ಅಧಿವೇಶನದಲ್ಲಿ ಭಾರತದ ಬಗ್ಗೆ ಪ್ರಶ್ನೆಯನ್ನು ಕೇಳಿದಾಗ ಗೋಪಿನಾಥ್ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಭಾರತ ಕೋವಿಡ್ ಲಸಿಕೆ ವಿತರಿಸುವಲ್ಲಿ ಮತ್ತು ಉತ್ಪಾದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ವಿಶ್ವದ ಅನೇಕ ಪ್ರಸಿದ್ಧ ವ್ಯಕ್ತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.