ನವದೆಹಲಿ: ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವದ ಪ್ರಗತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನಿನ ಪ್ರಧಾನಿ ಸುಗಾ ಯೋಶಿಹೈಡ್ ಅವರೊಂದಿಗೆ ನಿನ್ನೆ ಫಲಪ್ರದ ಸಂಭಾಷಣೆ ನಡೆಸಿದರು. ಪರಸ್ಪರ ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳಿಂದ ಮಾರ್ಗದರ್ಶಿಸಲ್ಪಟ್ಟ ಕಳೆದ ಕೆಲವು ವರ್ಷಗಳಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವದ ಸಕಾರಾತ್ಮಕ ಬೆಳವಣಿಗೆ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು.
ಕೋವಿಡ್-19 ಸಾಂಕ್ರಾಮಿಕ ರೋಗದ ಹೊರತಾಗಿಯೂ ಕಳೆದ ವರ್ಷದಲ್ಲಿ ದ್ವಿಪಕ್ಷೀಯ ವಿನಿಮಯವನ್ನು ನಿರ್ವಹಿಸಲಾಗಿದೆ ಎಂದು ನಾಯಕರು ಶ್ಲಾಘಿಸಿದರು. ನಿರ್ದಿಷ್ಟ ಕೌಶಲ್ಯಪೂರ್ಣ ಕಾರ್ಮಿಕರ ಮೇಲಿನ ಸಹಕಾರ ಒಪ್ಪಂದಕ್ಕೆ (ಎಸ್ಎಸ್ಡಬ್ಲ್ಯು) ಇತ್ತೀಚೆಗೆ ಸಹಿ ಹಾಕಿದ್ದನ್ನು ನಾಯಕರು ಸ್ವಾಗತಿಸಿದರು ಮತ್ತು ಅದರ ಆರಂಭಿಕ ಅನುಷ್ಠಾನಕ್ಕಾಗಿ ಎದುರು ನೋಡುತ್ತಿರುವುದಾಗಿ ಹೇಳಿದರು.
ಮುಂಬೈ ಅಹಮದಾಬಾದ್ ಹೈ ಸ್ಪೀಡ್ ರೈಲು (ಎಂಎಹೆಚ್ಎಸ್ಆರ್) ಯೋಜನೆಯು ಭಾರತ-ಜಪಾನ್ ದ್ವಿಪಕ್ಷೀಯ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಮಹತ್ವದ ಉದಾಹರಣೆಯೆಂದು ಪ್ರಧಾನಿ ಮೋದಿ ಹೇಳಿದರು ಮತ್ತು ಅದರ ಯಶಸ್ವಿ ಅನುಷ್ಠಾನಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
ಉಭಯ ನಾಯಕರು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಸಾಮಾನ್ಯ ಸವಾಲುಗಳನ್ನು ಎದುರಿಸುವಲ್ಲಿ ಉಭಯ ದೇಶಗಳ ನಡುವಿನ ಸಹಭಾಗಿತ್ವವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಒಪ್ಪಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.