ನವದೆಹಲಿ: ದೆಹಲಿಯಲ್ಲಿನ ಐತಿಹಾಸಿಕ ಸ್ಮಾರಕ ಕೆಂಪುಕೋಟೆಯಲ್ಲಿ ರೈತರ ಟ್ರ್ಯಾಕ್ಟರ್ ಸಮಾವೇಶದ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಈಟಿಯಿಂದ ಹಲ್ಲೆ ಮಾಡಿದ 21 ವರ್ಷದ ಯುವಕ ಸೇರಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಇದರೊಂದಿಗೆ, ಗಣರಾಜ್ಯೋತ್ಸವದಂದು ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧನಗಳ ಸಂಖ್ಯೆ 14ಕ್ಕೆ ಏರಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಪರಾಧ ವಿಭಾಗದ ವಿವಿಧ ತಂಡಗಳು ಅಪರಾಧಿಗಳ ಹುಡುಕಾಟಕ್ಕಾಗಿ ದೆಹಲಿ ಮತ್ತು ಪಂಜಾಬ್ನ ವಿವಿಧ ಸ್ಥಳಗಳಲ್ಲಿ ನಿಯಮಿತವಾಗಿ ದಾಳಿ ನಡೆಸುತ್ತಿವೆ.
ಹಿಂಸಾಚಾರದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಮನಿಂದರ್ಜಿತ್ ಸಿಂಗ್ (23) ಮತ್ತು ಖೇಂಪ್ರೀತ್ ಸಿಂಗ್ (21) ಅವರನ್ನು ಮಂಗಳವಾರ ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಯುಕೆಯ ಬರ್ಮಿಂಗ್ಹ್ಯಾಮ್ನಲ್ಲಿ ನೆಲೆಸಿದ ಡಚ್ ಪ್ರಜೆಯಾದ ಮನಿಂದರ್ಜಿತ್ ಸಿಂಗ್ ಅನ್ನು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಪ್ರಯಾಣ ದಾಖಲೆಗಳೊಂದಿಗೆ ಭಾರತದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ.
ಇನ್ನೊಬ್ಬ ಆರೋಪಿ ಖೇಂಪ್ರೀತ್ ಸಿಂಗ್, ವಾಯುವ್ಯ ದೆಹಲಿಯ ಸ್ವರೂಪ್ ನಗರ ನಿವಾಸಯಾಗಿದ್ದಾನೆ. ಈತ ಕೆಂಪು ಕೋಟೆಯ ಬಾವಿ ಪ್ರದೇಶದೊಳಗೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಈಟಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈತ ಪ್ರತಿಭಟನೆ ಬಳಿಕ ಪರಾರಿಯಾಗಿದ್ದ.
Two persons — Maninderjit Singh (a Dutch national settled in Birmingham, UK) (in pic 1) & Khempreet Singh ( in pic 2) — have been arrested in connection with the Jan 26 Red Fort violence case: Delhi Police Crime Branch
(Photo source — Crime Branch) pic.twitter.com/kawXEygA11
— ANI (@ANI) March 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.