ಕೋಲಾರ: “ನಮ್ಮ ಬೇಡಿಕೆಗಳ ಬಗ್ಗೆ ಮನವಿ ಕೊಡುವ ಸಂದರ್ಭ ಹಿಂಸಾಚಾರ ಭುಗಿಲೆದ್ದು, ಅನಾವಶ್ಯಕ ಘಟನೆಗಳಿಗೆ ಕಾರಣವಾಗುತ್ತದೆ. ಈ ರೀತಿಯ ಘಟನೆಗಳಿಂದ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಂಡು ಬೀದಿ ಪಾಲಾಗುವ ಸಮಸ್ಯೆ ಎದುರಾಗಲಿದೆ” ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ವಿಸ್ಟ್ರಾನ್ ಕಂಪನಿಗೆ ಭೇಟಿ ನೀಡಿದ ಸಂದರ್ಭ ಹೇಳಿದರು.
ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ತರುವುದು ಉತ್ತಮ ಎಂದು ವಿಸ್ಟ್ರಾನ್ ಸಿಬ್ಬಂದಿಗಳಿಗೆ ಅವರು ಸಲಹೆ ನೀಡಿದರು.
ಕೆಲವೊಂದು ಸಮಸ್ಯೆಗಳಿಂದಾಗಿ ಸಿಬ್ಬಂದಿಗಳು ಆಕ್ರೋಶಕ್ಕೆ ಅಪಾರ ಹಾನಿಮಾಡಿಕೊಂಡ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿಗೆ ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಶೆಟ್ಟರ್ ಪರಿಶೀಲನೆ ನಡೆಸಿದರು.
ನಂತರ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಶೆಟ್ಟರ್ ಕಾರ್ಮಿಕರ ಈಗಿನ ಸ್ಥಿತಿಗತಿಯ ಬಗ್ಗೆ ವಿಚಾರಿಸಿದರು. ಕಾರ್ಮಿಕರು ಕೆಲವೇ ಜನರ ಮುಂಗೋಪದ ಪರಿಣಾಮವಾಗಿ ಈ ಆಕ್ರೋಶವನ್ನು ಅನುಭವಿಸಬೇಕಾಯಿತು ಎಂದು ನಡೆದ ಪರಿಸ್ಥಿತಿಯನ್ನು ಸಚಿವರ ಮುಂದೆ ವಿವರಿಸಿದರು.
ಪ್ರಸ್ತುತ ಅನೇಕ ಕೈಗಾರಿಕಾ ಕಂಪನಿಗಳು ಬರುತ್ತಿವೆ. ಈ ಹಿಂದೆ ಈ ರೀತಿಯ ಕೈಗಾರಿಕಾ ವಾತವರಣಗಳು ನಮ್ಮಲ್ಲಿರಲಿಲ್ಲ. ಇನ್ನಷ್ಟು ಸಂಸ್ಥೆಗಳು ಭಾರತಕ್ಕೆ ಬರುವಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮಲ್ಲಿದೆ ಎಂದು ಶೆಟ್ಟರ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.