ಬೆಂಗಳೂರು: ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಗರಿಷ್ಠ ಮೀಸಲು ಪ್ರಮಾಣವನ್ನು 50% ಕ್ಕಿಂತ ಹೆಚ್ಚು ಏರಿಕೆ ಮಾಡಬಹುದೇ ಎಂದು ಸುಪ್ರೀಂಕೋರ್ಟ್ ರಾಜ್ಯದ ಅಭಿಪ್ರಾಯ ಕೇಳಿದ್ದು, ಈ ಬಗ್ಗೆ ಸರ್ಕಾರ ತನ್ನ ನಿಲುವು ತಿಳಿಸಿ ಶೀಘ್ರದಲ್ಲೇ ಪ್ರಮಾಣಪತ್ರ ಸಲ್ಲಿಕೆ ಮಾಡಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿಗೆ ಬೇಡಿಕೆ ಇರಿಸಿವೆ. ಇದಕ್ಕೆ ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ಸೂಚನೆ ಪರಿಹಾರ ಕಂಡುಕೊಳ್ಳಲು ದಾರಿಯಾಗಬಹುದು. ಈ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳ ಮೂವರು ಸದಸ್ಯರ ತಂಡವನ್ನು ರಚಿಸಲಾಗುತ್ತದೆ. ಸಾಂವಿಧಾನಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಮೀಸಲಾತಿಗೆ ಸಂಬಂಧಿಸಿದಂತೆ ಏನೇ ತೀರ್ಮಾನಗಳನ್ನು ತೆಗೆದುಕೊಳ್ಳುವುದಿದ್ದರೂ, ಅಧ್ಯಯನಾಧರಿತ ಸಾಂವಿಧಾನಿಕ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಇರಬೇಕು. ಇಲ್ಲವಾದರೆ ಕಾನೂನಿನ ಮಾನ್ಯತೆ ದೊರೆಯುವುದಿಲ್ಲ. ಆದ್ದರಿಂದ ಈ ಸಂಬಂಧ ಸರಿಯಾದ ವರದಿ ತಯಾರಿಸಿ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಸರ್ಕಾರದ ಪರವಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.