News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭೂಪಿಂದರ್ ಸಿಂಗ್ ಹೂಡಾ ವರ್ತನೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ


ಬೆಂಗಳೂರು: ಮಹಿಳೆಯರಿಗೆ ಅವಮಾನ ಮಾಡಿದ ಭೂಪಿಂದರ್ ಸಿಂಗ್ ಹೂಡಾ ವರ್ತನೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಆಶಾ ರಾವ್ ಅವರು ಮಾತನಾಡಿ, ಹರಿಯಾಣದ ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ತಾವು ಟ್ರ್ಯಾಕ್ಟರ್‌ನಲ್ಲಿ ಚಾಲಕನ ಸ್ಥಾನದಲ್ಲಿ ಕುಳಿತುಕೊಂಡು, ಅದನ್ನು ಎಳೆಯಲು ಮಹಿಳಾ ಶಾಸಕಿಯರನ್ನು ಬಳಸಿಕೊಂಡಿದ್ದಾರೆ. ಇದು ಮಹಿಳಾ ದಿನಾಚರಣೆಯಂದೇ ನಡೆದಿದೆ. ಮಹಿಳೆಯರನ್ನು ತಾಯಿಯ ಸ್ಥಾನದಲ್ಲಿ ನೋಡುವ ಸಂಸ್ಕøತಿ ಭಾರತೀಯರದ್ದು. ಕಾಂಗ್ರೆಸ್ ಮುಖಂಡರು ಮಹಿಳೆಗೆ ಮಾಡಿದ ಅವಮಾನವನ್ನು ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದರು.

ಮಹಿಳೆಯರನ್ನು ಅಪಮಾನ ಮಾಡಿದ ಕಾಂಗ್ರೆಸ್ ಪಕ್ಷದವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಇಂಥ ಘಟನೆಗಳು ಮರುಕಳಿಸಬಾರದು ಎಂದು ಒತ್ತಾಯಿಸಿದರು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದೇ ಮಹಿಳೆಯರನ್ನು ಜೀತದಾಳುಗಳಂತೆ ಬಳಸಿಕೊಂಡ ಹೂಡಾ ಅವರ ವರ್ತನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದೂ ಅವರು ತಿಳಿಸಿದರು.

“ಡೌನ್ ಡೌನ್ ಕಾಂಗ್ರೆಸ್”, “ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ”, “ಮಹಿಳೆಯರನ್ನು ಅವಮಾನ ಮಾಡಿದ ಹೂಡಾಗೆ ಧಿಕ್ಕಾರ”- ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ಕಾರ್ಯಕರ್ತೆಯರು “ಭಾರತ್ ಮಾತಾಕಿ ಜೈ” “ವಂದೇ ಮಾತರಂ” ಘೋಷಣೆಯನ್ನೂ ಕೂಗಿದರು.

ಬೆಂಗಳೂರು ದಕ್ಷಿಣ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಆನಂದ್, ಉತ್ತರ ಮತ್ತು ದಕ್ಷಿಣ, ಕೇಂದ್ರ ಜಿಲ್ಲೆಗಳ ಕಾರ್ಯಕರ್ತೆಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top