ಬೆಂಗಳೂರು: ದೇಶದಾದ್ಯಂತ ಎರಡನೇ ಹಂತದ ಕೊರೋನಾ ಲಸಿಕೆ ಅಭಿಯಾನ ಮಾರ್ಚ್ 1 ರಿಂದ ತೊಡಗಿದಂತೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಕೊರೋನಾ ಲಸಿಕೆ ಪಡೆದಿದ್ದಾರೆ.
ದೇಶದಲ್ಲಿ ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ಗೆ ಕೊರೋನಾ ಲಸಿಕೆ ನೀಡಲಾಗಿತ್ತು. 2 ನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯ ಸಮಸ್ಯೆ ಉಳ್ಳವರಿಗೆ ಕೊರೋನಾ ಲಸಿಕೆ ನೀಡಲು ಆರಂಭ ಮಾಡಲಾಗಿತ್ತು. ಎರಡನೇ ಹಂತದಲ್ಲಿ ಇದೀಗ ಸಿಎಂ ಯಡಿಯೂರಪ್ಪ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದಾರೆ. 28 ದಿನಗಳ ಬಳಿಕ ಲಸಿಕೆಯ ಎರಡನೇ ಡೋಸ್ ಅನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ ಎಂಬುದಾಗಿಯೂ ಮೂಲಗಳು ತಿಳಿಸಿವೆ.
ಬಳಿಕ ಟ್ವೀಟ್ ಮಾಡಿರುವ ಸಿಎಂ, ತಾನು ಕೊರೋನಾ ಲಸಿಕೆ ಪಡೆದಿದ್ದೇನೆ. ಎರಡನೇ ಹಂತದಲ್ಲಿ ಲಸಿಕೆ ಪಡೆದುಕೊಳ್ಳಲು ಯಾರು ಅರ್ಹರೋ, ಅವರು ಸ್ವಯಂಪ್ರೇರಿತರಾಗಿ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯುವಂತೆ ಸೂಚಿಸಿದ್ದಾರೆ. ಆ ಮೂಲಕ ಭಾರತ ಮತ್ತು ಕರ್ನಾಟಕವನ್ನು ಕೊರೋನಾ ಮುಕ್ತವಾಗಿಸಲು ಪ್ರತಿಯೋರ್ವರೂ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
Today I took the first dose of Made in India Covid-19 vaccine at Bangalore Medical College. I urge all those eligible to register themselves and get the vaccination at the earliest.
Let each one of us join hands in making India and Karnataka Covid-19 free. pic.twitter.com/S38q8BCed5
— B.S. Yediyurappa (@BSYBJP) March 12, 2021
ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.