ಬೆಂಗಳೂರು: ನಗರದ ಬೈಯಪ್ಪನಹಳ್ಳಿಯಲ್ಲಿ ಸುಮಾರು 314 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸರ್. ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಮಾರ್ಚ್ ಅಂತ್ಯದ ವೇಳೆಗೆ ಉದ್ಘಾಟನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಈ ನೂತನ ಟರ್ಮಿನಲ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೋಲುತ್ತಿದ್ದು, ಹವಾನಿಯಂತ್ರಿತ ವ್ಯವಸ್ಥೆ, ಫ್ಲಾಟ್ ಫಾರ್ಮ್ಗಳು, ಬಸ್ ಬೇ, ವಿಶ್ರಾಂತಿ ಕೊಠಡಿ, ಶೌಚಾಲಯ, ವಿಶಾಲವಾದ ವಾಹನ ಪಾರ್ಕಿಂಗ್ ಏರಿಯಾ ಸೇರಿದಂತೆ ಇನ್ನಿತರ ಹಲವು ಆಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ.
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣದ ಬಳಿಕ ನಗರದ 3ನೇ ಕೋಚಿಂಗ್ ಟರ್ಮಿನಲ್ ಇದಾಗಿದೆ. ಈ ಟರ್ಮಿನಲ್ ಲೋಕಾರ್ಪಣೆ ಬಳಿಕ ಪ್ರಯಾಣಿಕರ ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ ಎಂದು ರೈಲ್ವೆ ಮೂಲಗಳು ಹೇಳಿವೆ. ಇಲ್ಲಿಂದ ಕಾರ್ಯ ನಿರ್ವಹಿಸುವ ದೂರ ಪ್ರಯಾಣದ ರೈಲುಗಳ ಬಗೆಗೂ ನೈಋತ್ಯ ರೈಲ್ವೆ ಈಗಾಗಲೇ ಯೋಜನೆಗಳನ್ನು ರೂಪಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕೇಂದ್ರ ರೈಲ್ವೆ ಸಚಿವ ಪೀಯುಷ್ ಗೋಯಲ್, ಪ್ರಖ್ಯಾತ ಎಂಜಿನಿಯರ್ ಸರ್. ಎಂ. ವಿಶ್ವೇಶ್ವರಯ್ಯ ಅವರ ಹೆಸರಿನ ನೂತನ ಭಾರತದ ಮೊದಲ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ ಎಂದು ತಿಳಿಸಿದ್ದಾರೆ.
Named after one of the foremost Civil Engineers Bharat Ratna Sir M Visvesvaraya, India’s first centralised AC Railway terminal in Bengaluru is all set to become operational soon. pic.twitter.com/L2agyUevd1
— Piyush Goyal (@PiyushGoyal) March 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.