ನವದೆಹಲಿ: ಹರಿಯಾಣದ ಕುಂಡ್ಲಿ ಮತ್ತು ತಮಿಳುನಾಡಿನ ತಂಜಾವೂರಿನಲ್ಲಿರುವ ಎರಡು ಆಹಾರ ತಂತ್ರಜ್ಞಾನ ಸಂಸ್ಥೆಗಳನ್ನು ರಾಷ್ಟ್ರೀಯ ಸಂಸ್ಥೆಗಳೆಂದು ಘೋಷಿಸುವ ಮಸೂದೆಗೆ ರಾಜ್ಯಸಭೆ ಸೋಮವಾರ ಅನುಮೋದನೆ ನೀಡಿದೆ.
ರಾಜ್ಯಸಭೆಯು ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣಾ ಮಸೂದೆ, 2019 ಅನ್ನು ಧ್ವನಿ ಮತದಿಂದ ಅಂಗೀಕರಿಸಿತು.
ಮಸೂದೆಯು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಡ್ ಟೆಕ್ನಾಲಜಿ ಎಂಟರ್ಪ್ರೆನರ್ಶಿಪ್ ಕುಂಡ್ಲಿ ಮತ್ತು ತಂಜಾವೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಫುಡ್ ಪ್ರಾಸೆಂಸಿಗ್ ಟೆಕ್ನಾಲಜಿಯನ್ನು ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆಯ ರಾಷ್ಟ್ರೀಯ ಸಂಸ್ಥೆಗಳೆಂದು ಘೋಷಿಸಿದೆ.
ಈ ಸಂಸ್ಥೆಗಳಲ್ಲಿ ಮೀಸಲಾತಿ ನೀತಿಯ ಅನುಷ್ಠಾನದ ಬಗ್ಗೆ ಸದಸ್ಯರ ಅನುಮಾನಗಳನ್ನು ನಿವಾರಿಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಸದನದಲ್ಲಿ ಮಸೂದೆಗೆ ಉತ್ತರಿಸುವಾಗ ರಾಷ್ಟ್ರೀಯ ಪ್ರಾಮುಖ್ಯತೆಯ ಎಲ್ಲಾ ನೀತಿಗಳನ್ನು ಈ ಸಂಸ್ಥೆಗಳಲ್ಲಿ ಜಾರಿಗೆ ತರಲಾಗುವುದು ಮತ್ತು ಮೀಸಲಾತಿ ಈ ಸಂಸ್ಥೆಗಳಲ್ಲಿ ಅನ್ವಯವಾಗುತ್ತದೆ ಎಂದು ಹೇಳಿದರು.
ಆಹಾರ ತಂತ್ರಜ್ಞಾನದಲ್ಲಿ ಕೆಲಸ ಮಾಡುವ ಎಲ್ಲ ಜನರಿಗೆ ಈ ಸಂಸ್ಥೆಗಳಲ್ಲಿ ಪ್ರಾತಿನಿಧ್ಯವಿದೆ ಎಂದು ಅವರು ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.