ಆಗ್ರಾ: ಪರಿಸರ ಸೂಕ್ಷ್ಮ ವಲಯವಾದ ತಾಜ್ಮಹಲ್ ಸುತ್ತಮುತ್ತ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯದಂತೆ ಮತ್ತು ಮರಗಳನ್ನು ಕಡಿಯಲು ಬಿಡದಂತೆ ನೋಡಿಕೊಳ್ಳಬೇಕು ಎಂದು ಉತ್ತರಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸೂಚಿಸಿದೆ.
ಅರಣ್ಯ ವಲಯಕ್ಕೆ ಬೌಂಡರಿ ಲೈನ್ಗಳನ್ನು ಹಾಕಬೇಕು ಮತ್ತು ಆಗ್ರಾದ ತಾಜ್ ತ್ರಪಿಝಿಯಂ ಝೋನ್, ಮಥುರಾ ಮತ್ತು ಫಿರೋಝಾಬಾದ್ ಜಿಲ್ಲೆಯಲ್ಲಿ 10,400 sq ಕಿ.ಮೀಯನ್ನು ಅರಣ್ಯಪ್ರದೇಶಕ್ಕೆ ಮೀಸಲು ಮಾಡಬೇಕು ಎಂದು ಹಸಿರು ನ್ಯಾಯಮಂಡಳಿ ತನ್ನ ಮಧ್ಯಂತರ ಆದೇಶದಲ್ಲಿ ಯುಪಿ ಸರ್ಕಾರಕ್ಕೆ ಸೂಚಿಸಿದೆ.
ತಾಜ್ ಮಹಲ್ ಸುತ್ತಮುತ್ತ ಮರಗಳನ್ನು ಕಡಿಯಲಾಗುತ್ತಿದೆ, ಇದರಿಂದ ಅರಣ್ಯ ಪ್ರದೇಶಗಳು ನಾಶವಾಗುತ್ತಿದೆ. ಯಮುನಾ ನದಿಯ ತಟ ಸೇರಿದಂತೆ ಈ ಭಾಗದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳೂ ಅತ್ಯಧಿಕ ಸಂಖ್ಯೆಯಲ್ಲಿ ನಡೆಯುತ್ತಿದೆ. ಇದು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಎಂ.ಸಿ.ಮೆಹ್ತಾ ಸಮಿತಿ ವರದಿ ನೀಡಿತ್ತು.
ಈ ಹಿನ್ನಲೆಯಲ್ಲಿ ಹಸಿರು ನ್ಯಾಯಮಂಡಳಿ ಈ ಆದೇಶ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.