ನವದೆಹಲಿ: ರಾಮ ಮಂದಿರ, ಕಲಂ 370 ಮತ್ತು ತ್ರಿವಳಿ ತಲಾಖ್ ಮಾದರಿಯಲ್ಲೇ ಬಿಜೆಪಿ ಸಮಾನ ನಾಗರಿಕ ಸಂಹಿತೆಯ ಭರವಸೆಯನ್ನು ಕೂಡ ಈಡೇರಿಸಲು ಬದ್ಧವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
“ನಾವು ರಾಮ ಮಂದಿರದ ಬಗ್ಗೆ ಮಾತನಾಡುವಾಗಲೆಲ್ಲಾ ಜನರು ನಮ್ಮನ್ನು ಗೇಲಿ ಮಾಡುತ್ತಿದ್ದರು ಮತ್ತು ನಮಗೆ ಮಾತನಾಡಲು ಬೇರೆ ಯಾವುದೇ ಸಮಸ್ಯೆಗಳು ಇಲ್ಲ ಎಂದು ಹೇಳುತ್ತಿದ್ದರು. ಕಲಂ 370 ಮತ್ತು ತ್ರಿವಳಿ ತಲಾಖ್ ಕುರಿತು ನಾವು ನೀಡಿದ ಭರವಸೆಯನ್ನು ಈಡೇರಿಸಿದ್ದೇವೆ. ಸಮಾನ ನಾಗರಿಕತೆಯ ಬಗ್ಗೆ ನಾವು ಹೇಳಿದ್ದನ್ನು ಕೂಡ ನಾವು ಮಾಡಿ ತೋರಿಸುತ್ತೇವೆ” ಎಂದಿದ್ದಾರೆ.
ಸಮಾನ ನಾಗರಿಕ ಸಂಹಿತೆಯು ಯಾವುದೇ ನಂಬಿಕೆ ಅಥವಾ ಧರ್ಮಕ್ಕೆ ವಿರುದ್ಧವಾಗಿರುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.
“ಇದು ಹಿಂದೂಗಳು, ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರ ವಿರುದ್ಧವಾಗಿರುವುದಿಲ್ಲ. ನಮ್ಮ ರಾಜಕೀಯವು ಮಾನವರು ಮತ್ತು ಮಾನವೀಯತೆಯ ಪರವಾಗಿದೆ” ಎಂದು ಅವರು ಹೇಳಿದ್ದಾರೆ.
ಪಕ್ಷವು ತನ್ನ ಭರವಸೆಗಳನ್ನು ಈಡೇರಿಸದಿದ್ದರೆ, ಅದು ವಿಶ್ವಾಸಾರ್ಹ ಕೊರತೆಗೆ ಕಾರಣವಾಗುತ್ತದೆ ಎಂದು ಸಿಂಗ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.