ಮುಂಬಯಿ: ಜನಪ್ರಿಯ ಟಿವಿ ಧಾರಾವಾಹಿ “ರಾಮಾಯಣ” ದಲ್ಲಿ ಭಗವಾನ್ ರಾಮನ ಪಾತ್ರ ಮಾಡಿ ಹೆಸರುವಾಸಿಯಾಗಿದ್ದ ನಟ ಅರುಣ್ ಗೋವಿಲ್ ಅವರು ಇಂದು ಬಿಜೆಪಿ ಪಕ್ಷವನ್ನು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಅವರಿಗೆ ಪಕ್ಷದ ಸದಸ್ಯತ್ವವನ್ನು ಪ್ರದಾನಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಪಶ್ಚಿಮ ಉತ್ತರ ಪ್ರದೇಶದ ಮೀರತ್ ಮೂಲದ ಈ ನಟ ಈ ಹಿಂದೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳ ಆಹ್ವಾನವನ್ನು ನಿರಾಕರಿಸಿದ್ದರು. ಆದರೆ ಬಳಿಕ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದರು.
“ಹೌದು, ನಾನು ಬಿಜೆಪಿಗೆ ಸೇರಲು ಬಯಸುತ್ತೇನೆ ಮತ್ತು ನನಗೆ ಪ್ರಸ್ತಾಪ ಬಂದರೆ ಹಾಗೆ ಮಾಡುತ್ತೇನೆ” ಎಂದು ಅವರು ಈ ಹಿಂದೆ ಹೇಳಿದ್ದರು.
Actor Arun Govil joins BJP at party headquarters in New Delhi. #JoinBJP pic.twitter.com/eiI1aCdRRt
— BJP (@BJP4India) March 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.