ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಲೋಕಸಭೆಯಲ್ಲಿ ವೆಹಿಕಲ್ ಸ್ಕ್ರ್ಯಾಪಿಂಗ್ ನೀತಿಯನ್ನು ಪರಿಚಯಿಸಿದ್ದಾರೆ. ಇದು ಮಾಲಿನ್ಯಕಾರಕ ವಾಹನಗಳನ್ನು ಹಂತಹಂತವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದೆ.
ಈ ಕುರಿತು ಹೇಳಿಕೆ ನೀಡಿದ ಗಡ್ಕರಿ, ಮಾಲಿನ್ಯಕಾರಕಗಳ ವಾಹನಗಳ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮೂಲಕ ವಾಹನ ವಲಯದಲ್ಲಿ ಪರಿವರ್ತನೀಯ ಬದಲಾವಣೆಗಳನ್ನು ಈ ನೀತಿ ತರಲಿದೆ ಎಂದು ಹೇಳಿದ್ದಾರೆ.
ಇದು ವಾಹನಗಳ ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ, ರಸ್ತೆ ಮತ್ತು ವಾಹನ ಸುರಕ್ಷತೆಯನ್ನು ಖಚಿತಪಡಿಸುತ್ತದೆ, ಹೂಡಿಕೆಯನ್ನು ಆಕರ್ಷಿಸುತ್ತದೆ, ಕೈಗಾರಿಕೆಗಳಿಗೆ ಕಡಿಮೆ ಬೆಲೆಯ ಕಚ್ಚಾ ವಸ್ತುಗಳ ಲಭ್ಯತೆಯನ್ನು ಹೆಚ್ಚಿಸುತ್ತದೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜಿಎಸ್ಟಿ ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.
ಈ ನೀತಿ ಅನುಷ್ಠಾನದೊಂದಿಗೆ ದೇಶದಲ್ಲಿ 3.7 ಕೋಟಿಗೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ಸ್ಕ್ರ್ಯಾಪಿಂಗ್ ಪ್ರಮಾಣಪತ್ರಗಳನ್ನು ತಯಾರಿಸಿದ ನಂತರ ನೋಂದಾಯಿತ ಸ್ಕ್ರ್ಯಾಪಿಂಗ್ ಕೇಂದ್ರಗಳ ಮೂಲಕ ಹಳೆಯ ಮತ್ತು ಅನರ್ಹ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಹಳೆಯ ವಾಹನಗಳ ಮಾಲೀಕರಿಗೆ ಈ ಯೋಜನೆ ಪ್ರೋತ್ಸಾಹ ನೀಡುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ಭಾರತವು ಆಟೋಮೊಬೈಲ್ ಕ್ಷೇತ್ರದಲ್ಲಿ ಜಾಗತಿಕ ನಾಯಕನಾಗಲಿದೆ ಮತ್ತು ಮುಂದಿನ ಒಂದು ವರ್ಷದಲ್ಲಿ ದೇಶಕ್ಕೆ ಸ್ಥಳೀಯವಾಗಿ ಶೇಕಡಾ 100 ರಷ್ಟು ಲಿಥಿಯಂ ಅಯಾನ್ ಬ್ಯಾಟರಿಗಳನ್ನು ಉತ್ಪಾದಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ಪ್ರತಿಪಾದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.