ಬೆಂಗಳೂರು: ಮಹಾತ್ಮಾಗಾಂದಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ದಿನಗೂಲಿಯಲ್ಲಿ 14 ರೂ. ಗಳನ್ನು ಏರಿಕೆ ಮಾಡಲಾಗಿದ್ದು, ಈ ನೂತನ ಕೂಲಿ ದರ ಎ. 1 ರಿಂದ ತೊಡಗಿದಂತೆಯೇ ರಾಜ್ಯಾದ್ಯಂತ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ನರೇಗಾ ಯೋಜನೆಯಡಿ 275 ರೂ. ಗಳನ್ನು ದಿನಗೂಲಿಯಾಗಿ ನೀಡಲಾಗುತ್ತಿದೆ. ಈ ದರ ಎ. 1 ರಿಂದ ತೊಡಗಿದಂತೆ 289 ರೂ. ಗಳಿಕೆ ಏರಿಕೆಯಾಗಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದಾಗಿಯೂ ಮೂಲಗಳು ತಿಳಿಸಿವೆ. ರಾಷ್ಟ್ರದಲ್ಲಿ ನಿರುದ್ಯೋಗವನ್ನು ನಿವಾರಣೆ ಮಾಡುವ ಗುರಿಯನ್ನು ಹೊತ್ತು ಸರ್ಕಾರ ನರೇಗಾ ಯೋಜನೆ ರೂಪಿಸಿದೆ. ದೇಶದ ಬಡ ಕುಟುಂಬಗಳಿಗೆ ವರ್ಷಕ್ಕೆ ಕನಿಷ್ಟ 100 ದಿನಗಳ ಉದ್ಯೋಗ ಒದಗಿಸುವುದು, ಆ ಮೂಲಕ ಅವರ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 18 ವರ್ಷಕ್ಕಿಂತ ಮೇಲ್ಪಟ್ಟ ಜನರು ಈ ಯೋಜನೆಯಡಿ ನೋಂದಣಿ ಮಾಡಿಕೊಂಡಲ್ಲಿ ಅಂತಹ ವ್ಯಕ್ತಿಯ ಕುಟುಂಬಕ್ಕೆ 100 ದಿನಗಳ ಉದ್ಯೋಗವನ್ನು ನರೇಗಾದಡಿ ಸರ್ಕಾರ ಒದಗಿಸುತ್ತಿದೆ.
ಈ ಯೋಜನೆಯಡಿ ನಿತ್ಯ ಕೂಲಿಗೆ ವೇತನ ನೀಡಲಾಗುತ್ತದೆ. ಸ್ಥಳೀಯ ಗ್ರಾಮ ಪಂಚಾಯತ್ ಮೂಲಕ ಈ ಯೋಜನೆಯಡಿ ಉದ್ಯೋಗ ಚೀಟಿಯನ್ನು ಒದಗಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಮಹಿಳೆ ಮತ್ತು ಪುರುಷರಿಬ್ಬರಿಗೂ ಸಮಾನ ವೇತನ ವ್ಯವಸ್ಥೆ ಇದೆ. ನರೇಗಾದಡಿ ಕೆಲಸ ನಿರ್ವಹಿಸಿದ 15 ದಿನಗಳೊಳಗಾಗಿ ಬ್ಯಾಂಕ್ ಖಾತೆಗೆ ವೇತನ ವರ್ಗಾವಣೆ ಮಾಡಲಾಗುತ್ತದೆ. 15 ದಿನಗಳ ಅಂತರದಲ್ಲಿ ಕೆಲಸ ನೀಡಲು ಅಸಾಧ್ಯವಾದರೆ ನಿರುದ್ಯೋಗ ಭತ್ಯೆಯನ್ನೂ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.