ಬೆಂಗಳೂರು: ದೇಶದಲ್ಲಿ ರೂಪಾಂತರಿ ಕೊರೋನಾ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಕೊರೋನಾ ಲಸಿಕೆ ಅಗತ್ಯ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ದೇಶದ ಹಲವು ಕಡೆಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಸರ್ಕಾರ ಈಗಾಗಲೇ ಸಾರ್ವಜಿಕರಿಗೆ ಕಿವಿಮಾತು ಹೇಳಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಇನ್ನಿತರ ಕಠಿಣ ನಿಯಮಗಳನ್ನು ಪಾಲನೆ ಮಾಡುವಂತೆಯೂ ಸೂಚಿಸಿದೆ. ಹಾಗೆಯೇ ಕೊರೋನಾ ಲಸಿಕೆಗಳನ್ನು ನೀಡುವ ಪ್ರಮಾಣವನ್ನು ಹೆಚ್ಚಿಸುವುದು, ವಯೋಮಿತಿ ಸಡಿಲಿಸಿ ಎಲ್ಲಾ ವಯೋಮಾನದವರಿಗೂ ಕೊರೋನಾ ಲಸಿಕೆ ನೀಡುವುದು, ಕೊರೋನಾ ಮಾದರಿ ಪರೀಕ್ಷೆಗಳನ್ನು ಹೆಚ್ಚಿಸುವುದು ಸೇರಿದಂತೆ, ಸೋಂಕಿತರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೋವಿಡ್ ಲಸಿಕೆ ಪಡೆದುಕೊಳ್ಳಿ, ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.
ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕೋವಿಡ್ ಲಸಿಕೆ ಪಡೆದುಕೊಳ್ಳಿ, ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಯನ್ನು ಖಚಿತಪಡಿಸುತ್ತದೆ.
ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ.#KarnatakaFightsCorona#LargestVaccineDrive pic.twitter.com/LO1M7Nke1d
— CM of Karnataka (@CMofKarnataka) March 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.