ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಸಿಕೆಗಳನ್ನು ಹೆಚ್ಚಿಸುವ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ, ರಾಜ್ಯ ಆರೋಗ್ಯ ಇಲಾಖೆಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ವೈದ್ಯಕೀಯ ವ್ಯವಸ್ಥೆಗಳಲ್ಲಿ ಹಿಂದುಳಿದಿರುವ ಪ್ರದೇಶಗಳಲ್ಲಿ ಲಸಿಕೆ ವಿತರಣಾ ಕೇಂದ್ರಗಳನ್ನು ಹೆಚ್ಚಿಸುವಂತೆ, ಅದಕ್ಕೆ ಬೇಕಾದ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸೂಚಿಸಿದೆ.
ಈಗಾಗಲೇ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸಿಕೊಂಡು ಕೊರೋನಾ ಲಸಿಕೆ ವಿತರಣೆಗೆ ಪೂರಕ ವ್ಯವಸ್ಥೆಗಳನ್ನು ಜಾರಿಗೊಳಿಸಬೇಕು. ವೃದ್ಧಾಶ್ರಮ, ಅಪಾರ್ಟ್ಮೆಂಟ್ಗಳಲ್ಲಿಯೂ ಲಸಿಕೆ ನೀಡುವುದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವೃದ್ಧರಿಗೆ ಲಸಿಕೆ ಪಡೆಯಲು ಸಮೀಪದಲ್ಲೇ ಸೌಕರ್ಯಗಳಿರದೇ ಹೋದಲ್ಲಿ ಅದಕ್ಕೂ ಸಮರ್ಪಕ ವ್ಯವಸ್ಥೆಗಳನ್ನು ರೂಪಿಸಬೇಕು. ಇದಕ್ಕಾಗಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುವಂತೆ ರಾಜ್ಯಕ್ಕೆ ತಿಳಿಸಿದೆ. ಇದಕ್ಕಾಗಿ ಖಾಸಗಿ ಆರೋಗ್ಯ ವ್ಯವಸ್ಥೆಗಳನ್ನು ಸಹ ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.