ಬೆಂಗಳೂರು: ರಾಜ್ಯದ ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ಕರ್ನಾಟಕದ ಅತೀ ದೊಡ್ಡ ಕೈಗಾರಿಕಾ ಟೌನ್ಶಿಪ್ ನಿರ್ಮಾಣವಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭಾರತ್ ಗೋಲ್ಡ್ ಮೈನ್ಸ್ ಲಿ. ಗೆ ಸೇರಿದ 3212 ಎಕರೆ ಜಮೀನಿನಲ್ಲಿ ಡ್ರೋನ್ ಸಮೀಕ್ಷೆ ನಡೆಸುತ್ತಿದ್ದು, ಇದರಲ್ಲಿ 967 ಎಕರೆ ಜಮೀನು ಬಿಇಎಂಎಲ್ ಲಿ. ಗೆ ಸೇರಿದೆ ಎಂದು ಶೆಟ್ಟರ್ ಹೇಳಿದ್ದಾರೆ. ಸರ್ಕಾರ ಬಿಇಎಂಎಲ್ಗೆ ನೀಡಿದ ಜಮೀನಿನಲ್ಲಿ 967 ಎಕರೆ ಭೂಮಿ ಬಳಕೆಯಾಗದೇ ಉಳಿದಿದ್ದು, ಆ ಭೂಮಿಯನ್ನು ಈ ಯೋಜನೆಗೆ ಬಳಕೆ ಮಾಡಲು ಹಿಂಪಡೆದುಕೊಳ್ಳಲಾಗಿರುವುದಾಗಿಯೂ ಅವರು ಹೇಳಿದ್ದಾರೆ.
ಹಾಗೆಯೇ ಬಿಜಿಎಂಎಲ್ ಒಟ್ಟು 12 ಸಾವಿರ ಎಕರೆ ಭೂಮಿಯಲ್ಲಿ 3212 ಎಕರೆ ಜಮೀನನ್ನು ಯಾವುದೇ ಕೆಲಸಗಳಿಗೆ ಉಪಯೋಗಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ಭೂಮಿಯನ್ನು ಸರ್ಕಾರ ಪಡೆದುಕೊಂಡು, ಅಲ್ಲಿ ಟೌನ್ಶಿಪ್ ಸ್ಥಾಪನೆಗೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಈ ಹಿಂದೆಯೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರ ಬರೆದಿದ್ದು, ಖನಿಜ ನಿಕ್ಷೇಪಗಳಿಗೆ ಬಳಕೆಯಾಗದ ಭೂಮಿಯನ್ನು ಟೌನ್ಶಿಫ್ ನಿರ್ಮಾಣಕ್ಕೆ ರಾಜ್ಯಸರ್ಕಾರಕ್ಕೆ ನೀಡುವಂತೆಯೂ ಮನವಿ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ. ಇದೀಗ ಡ್ರೋನ್ ಮೂಲಕ ಈ ಭೂಮಿಯನ್ನು ಸಮೀಕ್ಷೆ ನಡೆಸಲಾಗುತ್ತಿದೆ ಎಂಬುದಾಗಿಯೂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.