ನವದೆಹಲಿ: ಇಂದಿಗೂ ಪ್ರತಿಭೆ ಮತ್ತು ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಸಿಗದೆ ಅದೆಷ್ಟು ಪ್ರತಿಭಾನ್ವಿತರು ವ್ಯವಸ್ಥೆಯ ವಿರುದ್ಧ ಅಸಮಧಾನ ವ್ಯಕ್ತಪಡಿಸುವುದಿದೆ. ಇದಕ್ಕೆ ಪೂರಕವಾಗಿ ದೇಶದ ಸಂವೀಧಾನ ಪೀಠವೇ ಮೀಸಲಾತಿಯ ಬಗ್ಗೆ ಚಕಾರ ಎತ್ತಿದೆ. ಶುಕ್ರವಾರ ಮರಾಠ ಮೀಸಲಾತಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಒಟ್ಟಾರೆ 50% ರಷ್ಟು ಮೀಸಲಾತಿ ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಐವರು ನ್ಯಾಯಧೀಶರ ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಸಾಂವಿಧಾನಿಕ ಪೀಠ, ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರಿಗೆ ಈ ಪ್ರಶ್ನೆಯನ್ನುಕೇಳಿದೆ. ಬದಲಾದ ಪರಿಸ್ಥಿತಿಗನುಗುಣವಾಗಿ ಮಂಡಲ್ ತೀರ್ಪನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದೆ. ಈ ಮಂಡಲ್ ತೀರ್ಪಿನಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು 5O% ಮಿತಿಗೊಳಿಸಲಾಗಿದೆ.
1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಗಿತ್ತು .ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ರಾಜ್ಯಗಳಿಗೆ ಬಿಡಬೇಕು ಎಂದು ರೋಹ್ಟಗಿ ಹೇಳಿದರು.
ಮರಾಠರಿಗೆ ಮೀಸಲಾತಿ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೋಹ್ಟಗಿ, ಇಂದ್ರ ಸಾಹ್ನಿ ಪ್ರಕರಣ ಎಂಬುದಾಗಿಯೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು. ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ 10% ರಷ್ಟು ಮೀಸಲಾತಿ ನೀಡುವ ಕೇಂದ್ರದ ನಿರ್ಧಾರ ನಿಯಮವನ್ನು ಉಲ್ಲಂಘಿಸಿದೆ ಎಂದು ತಿಳಿಸಿದ್ದಾರೆ.
ಈ ವಾದವನ್ನು ಆಲಿಸಿದ ನ್ಯಾಯಪೀಠ, 50% ಗಳಷ್ಟು ಮಿತಿಯಿಲ್ಲದಿದ್ದರೆ, ಸಮಾನತೆಯ ಪರಿಕಲ್ಪನೆ ಏನು?, ಈ ರೀತಿಯ ಮೀಸಲಾತಿ ಬೇಡಿಕೆ ಏನನ್ನು ಸೂಚಿಸಬಹುದು. ಮುಂದೆ ತಲೆದೋರಬಹುದಾದ ಅಸಮಾನತೆಗಳ ವಾದಗಳಿಗೆ ಉತ್ತರ ಏನು? ಸಂವಿಧಾನದಡಿ ಇನ್ನೂ ಎಷ್ಟು ತಲೆಮಾರುಗಳು ಮೀಸಲಾತಿ ಕಾಣಬೇಕು ಎಂದು ಪ್ರಶ್ನಿಸಿದೆ.
ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ. ರಾಜ್ಯಗಳು ಅನೇಕ ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ, ಇನ್ನೂ ಅಭಿವೃದ್ಧಿಯಾಗಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುವುದು ಸರಿಯೇ?. ಈ ಹಿಂದಿನ ಎಲ್ಲಾ ಪ್ರಯತ್ನಗಳಿಂದ ಅಭಿವೃದ್ಧಿಯಾಗಿದೆ ಎನ್ನುವುದನ್ನು ಒಪ್ಪಿಕೊಳ್ಳಬೇಕೆಂದು ನ್ಯಾಯಪೀಠ ಪ್ರಸ್ತುತತೆಯನ್ನು ಹೇಳಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.