ಹುಬ್ಬಳ್ಳಿ: ರಾಜ್ಯದಲ್ಲಿ ಕಂದಾಯ ಇಲಾಖೆಯ ಆಡಳಿತವನ್ನು ಜನರಿರುವಲ್ಲಿಗೆಯೇ ತಲುಪಿಸಬೇಕು. ಯಾವುದೇ ತಡೆಗಳಿಲ್ಲದೆ ಜನರು ಸೇವೆಗಳನ್ನು, ಸೌಲಭ್ಯಗಳನ್ನು ಪಡೆಯುವಂತಾಗಬೇಕು ಎಂಬ ಉದ್ದೇಶದಿಂದ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇವೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಇಂದು ಛಬ್ಬಿ ಗ್ರಾಮಕ್ಕೆ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಆಗಮಿಸಿದ ಅವರು, ಇದು ನನ್ನ ಎರಡನೇ ಗ್ರಾಮ ವಾಸ್ತವ್ಯ. ಜನತೆ ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆಯುವ ಬದಲಾಗಿ, ಅಧಿಕಾರಿಗಳೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುವುದು, ಅವರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ಮಹತ್ವದ ಕಾರ್ಯಕ್ಕೆ ಕ್ರಮ ಕೈಗೊಂಡಿರುವುದಾಗಿ ಅಶೋಕ್ ತಿಳಿಸಿದ್ದಾರೆ.
ಗ್ರಾಮ ವಾಸ್ತವ್ಯದ 15 ದಿನಗಳಿಗೂ ಮೊದಲೇ ಅಧಿಕಾರಿಗಳು ಅದಕ್ಕೆ ಪೂರಕ ತಯಾರಿಗಳನ್ನು ಮಾಡಿಕೊಳ್ಳುತ್ತಾರೆ. ಇದರಿಂದಾಗಿ ಜನರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವುದು ಸುಲಭವಾಗುತ್ತದೆ ಎಂದು ಅವರು ನುಡಿದಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಜನರಿಂದ ಬೆಂಬಲವೂ ದೊರೆಯುತ್ತಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರೂ ಈ ಯೋಜನೆಗೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.