ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ ವಿವಿಧ ಮಠ – ಮಂದಿರಗಳು, ಜಾತಿವಾರು ಸಂಘ ಸಂಸ್ಥೆಗಳಿಗೆ ಬರೋಬ್ಬರಿ 80.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಕಳೆದ ಬಾರಿ ಕೊರೋನಾ ಕಾರಣದಿಂದಾಗಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರ ತಡೆ ನೀಡಿತ್ತು. ಇದೀಗ ಮಂದಿರ, ಮಠ ಮಾನ್ಯಗಳಿಗೆ, ಜಾತಿವಾರು ಸಂಘ-ಸಂಸ್ಥೆಗಳಿಗೆ ಅನುದಾನ ನೀಡಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಮಾರ್ಚ್ 19 ರಂದು ಈ ಅನುದಾನ ಬಿಡುಗಡೆಗೆ ಆದೇಶ ನೀಡಿದೆ.
ರಾಜ್ಯಾಂದ್ಯಂತ 436 ಮಠಗಳು, ಮಂದಿರಗಳು, ದೇಗುಲಗಳಿಗೆ ಮತ್ತು ಜಾತಿ ಆಧರಿತ ಸಂಘ ಸಂಸ್ಥೆಗಳಿಗೆ ಈ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಮಂಜೂರಾತಿ ಮಾಡಲಾಗಿರುವ ಅನುದಾನವನ್ನು ಆಯಾ ಜಿಲ್ಲಾಧಿಕಾರಿಗಳ ಖಾತೆಗೆ ವರ್ಗಾವಣೆ ಮಾಡುವಂತೆಯೂ ರಾಜ್ಯದ ಖಜಾನೆ ಇಲಾಖೆಗೆ ಸರ್ಕಾರ ಸೂಚಿಸಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಶ್ರೀನಿವಾಸ ಪೂಜಾರಿ ಅವರು ಶಾಸಕರು, ಸಂಸದರು, ಸಾಧು-ಸಂತರ ಮನವಿಯನ್ನು ಆಧರಿಸಿ ಈ ಅನುದಾನ ಬಿಡುಗಡೆ ಮಾಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಲ್ಲಿ ಲಭ್ಯವಿದ್ದ ಅನುದಾನವನ್ನು ಇದಕ್ಕೆ ಬಳಕೆ ಮಾಡಲಾಗಿದೆ. ಇದರಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.