ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರು ವೇಣೂರಿನ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ ಮತೊಂದು ದಾಖಲೆ ಬರೆಯುವ ಮೂಲಕ ಹ್ಯಾಟ್ರಿಕ್ ಸಾಧಕ ಎನಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದ ಕಂಬಳದಲ್ಲಿ 8.96 ಸೆಕೆಂಡುಗಳಲ್ಲಿ 100 ಮೀ ಅಂತರವನ್ನು ಕ್ರಮಿಸುವ ಮೂಲಕ ನೂತನ ದಾಖಲೆ ಬರೆದಿದ್ದಾರೆ. ಈ ಹಿಂದೆ ಶ್ರೀನಿವಾಸ ಗೌಡ ಅವರು 100 ಮೀ ಕಂಬಳದ ಓಟವನ್ನು 9.55 ಸೆಕೆಂಡ್ನಲ್ಲಿ ಮುಗಿಸಿದ್ದರು. ಅದಕ್ಕೂ ಮೊದಲು 142.50 ಮೀ. ಓಟವನ್ನು 13.62 ಸೆಕೆಂಡ್ಗಳಲ್ಲಿ ಕ್ರಮಿಸಿದ್ದರು. ಇದೀಗ ಅವರು ತಮ್ಮ ಈ ಹಿಂದಿನ ದಾಖಲೆಗಳನ್ನೇ ಮುರಿಯುವ ಮೂಲಕ ಮತ್ತೊಂದು ದಾಖಲೆ ಮೆರೆದಿದ್ದಾರೆ.
ಕಳೆದ ಬಾರಿಯ ಕಂಬಳದಲ್ಲಿ ಶ್ರೀನಿವಾಸ್ ಅವರು 100 ಮೀ ಓಟವನ್ನು 9.55 ಸೆಕೆಂಡ್ಗಳಲ್ಲಿ ಮುಗಿಸಿ ಉಸೇನ್ ಬೋಲ್ಟ್ ಅವರ ಸಾಧನೆಯನ್ನು ಮುರಿದಿದ್ದರು. ಅಲ್ಲದೆ ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತರಾಗಿದ್ದರೂ. ಈ ಬಾರಿಯ ಕಂಬಳದಲ್ಲಿ ತಮ್ಮದೇ ದಾಖಲೆಯನ್ನು ಮುರಿಯುವ ಮೂಲಕ ಶ್ರೀನಿವಾಸ ಗೌಡರು ಮತ್ತೆ ದಾಖಲೆ ನಿರ್ಮಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.