ಬೆಂಗಳೂರು: ರಾಜ್ಯದ ಪೊಲೀಸ್ ನೇಮಕಾತಿ ಮೀಸಲು ನಿಯಮದಲ್ಲಿ 12 ವರ್ಷಗಳ ಬಳಿಕ ಮತ್ತೆ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲಾಗಿದೆ. 2% ಗಳಷ್ಟು ಮೀಸಲಾತಿಯನ್ನು ಕಲ್ಪಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕಳೆದ ವರ್ಷಗಳ ಹಿಂದೆ ಪೊಲೀಸ್ ಇಲಾಖೆಯ ನೇಮಕಾತಿಯ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಕೆಲವು ಹುದ್ದೆಗಳನ್ನು ಮೀಸಲಿರಿಸುವ ನಿಯಮ ಚಾಲ್ತಿಯಲ್ಲಿತ್ತು. ಆದರೆ ಆ ಬಳಿಕ ಈ ಕ್ರಮ ಅವೈಜ್ಞಾನಿಕ ಎಂಬ ಕಾರಣವನ್ನು ನೀಡಿ ಈ ನಿಯಮವನ್ನು ಕೈಬಿಡಲಾಗಿತ್ತು. ಈ ಹಿನ್ನಲೆಯಲ್ಲಿ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಮತ್ತೆ ಕ್ರೀಡಾಪಟುಗಳಿಗೆ ಮೀಸಲಾತಿಯನ್ನು ಕಲ್ಪಿಸುವಂತೆಯೂ ಸರ್ಕಾರಕ್ಕೆ ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿತ್ತು.
ಬೇರೆ ಬೇರೆ ಕ್ರೀಡೆಗಳಲ್ಲಿ ಸಾಧನೆ ಮೆರೆದ ಪೊಲೀಸ್ ಕಾನ್ಸ್ಟೇಬಲ್, ಎಸ್ಐ, ಡಿವೈಎಸ್ಪಿ ಹಂತದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಈ ಕ್ರೀಡಾ ಮೀಸಲಾತಿಯನ್ನು ನೀಡುವಂತೆ ಮನವಿ ಮಾಡಲಾಗಿತ್ತು. ಈ ಬೇಡಿಕೆಗೆ ರಾಜ್ಯ ಸರ್ಕಾರ 2020 ರ ನವೆಂಬರ್ ತಿಂಗಳಲ್ಲಿ ಸಮ್ಮತಿ ಸೂಚಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಇದೀಗ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.