ಬೆಂಗಳೂರು: ಕೇರಳದ ಕೊಚ್ಚಿನ್ನಲ್ಲಿರುವ ವಿಶೇಷ ಆರ್ಥಿಕ ವಲಯ ಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೂ ಈಗಾಗಲೇ ಮನವಿಯನ್ನು ಸಲ್ಲಿಸಲಾಗಿದೆ. ಕರ್ನಾಟಕದಲ್ಲಿ 36 ವಿಶೇಷ ಆರ್ಥಿಕ ವಲಯಗಳಿವೆ. ಈವರೆಗೆ ಇಟ್ಟು 495 ರಫ್ತು ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಇದರಿಂದಾಗಿ ಸುಮಾರು 3,74,728 ಜನರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಲಾಗಿದೆ ಎಂದು ಶೆಟ್ಟರ್ ತಿಳಿಸಿದ್ದಾರೆ.
ಈ ವಲಯಗಳು ಕೇಂದ್ರ ಸರ್ಕಾರ ಈಗಾಗಲೇ ರೂಪಿಸಿರುವ ನಿಯಮಗಳನ್ವಯವೇ ರಚನೆಯಾಗಿವೆ. ಸದ್ಯ ಕೊಚ್ಚಿನ್ನಲ್ಲಿರುವ ಕಚೇರಿಯನ್ನು ಎಸ್ಇಝೆಡ್ ಆಯುಕ್ತರು ಎರಡು ಮೂರು ರಾಜ್ಯಗಳ ವ್ಯಾಪಿಗೊಳಪಟ್ಟ ಅಧಿಕಾರಗಳನ್ನು ನೋಡಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿರುವ ಉಪಕಚೇರಿ ರಾಜ್ಯದ ಅಧಿಕಾರವನ್ನು ನೋಡಿಕೊಳ್ಳುತ್ತಿರುವುದಾಗಿಯೂ ಸಚಿವರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಕರ್ನಾಟಕ ಕೈಗಾರಿಕಾ ಸ್ನೇಹಿ ರಾಷ್ಟ್ರವಾಗಿದೆ. ದೇಶಕ್ಕೆ 4 ಲಕ್ಷ ಕೋಟಿಗಳಷ್ಟು ವಿದೇಶೀ ಹೂಡಿಕೆ ಬಂದಿದ್ದು, ಇದರಲ್ಲಿ ಕರ್ನಾಟಕ ರಾಜ್ಯವೊಂದೇ 1.60 ಲಕ್ಷ ಕೋಟಿ ಹೂಡಿಕೆಗಳನ್ನು ಆಕರ್ಷಿಸಿತ್ತು ಎಂಬುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.