ದಾವಣಗೆರೆ: ಪ್ರಯಾಣಿಕರ ಅನುಕೂಲಕ್ಕಾಗಿ ದಾವಣಗೆರೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ, ಪ್ರಯಾಣಿಕ ಸ್ನೇಹಿ ರೈಲ್ವೆ ನಿಲ್ದಾಣ ನಿರ್ಮಾಣವಾಗುತ್ತಿದೆ.
ಈ ನೂತನ ಟರ್ಮಿನಲ್ನ ಚಿತ್ರಗಳನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ʼಕರ್ನಾಟಕದ ದಾವಣಗೆರೆಯಲ್ಲಿ ಪ್ರಯಾಣಿಕರಿಗೆ ಪೂರಕ ಅನುಕೂಲಗಳನ್ನು ಒದಗಿಸುವ, ಅತ್ಯಾಧುನಿಕ ಅಗತ್ಯ ಮೂಲಸೌಕರ್ಯಗಳನ್ನೊಳಗೊಂಡ ರೈಲ್ವೆ ನೂತನ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿದೆʼ ಎಂದು ಅವರು ತಮ್ಮ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
Railways Transforming 🇮🇳: New station building with modern infrastructure has been constructed at Davangere in Karnataka for improved travel experience and convenience of passengers. pic.twitter.com/i8W3C4rfMN
— Piyush Goyal (@PiyushGoyal) March 22, 2021
ಈ ಸುಧಾರಿತ ರೈಲು ನಿಲ್ದಾಣ ಪ್ರಯಾಣಿಕರಿಗೆ ಸುಧಾರಿತ ಪ್ರಯಾಣದ ಅನುಭವಗಳನ್ನು ಒದಗಿಸಲಿದೆ. ಈ ರೈಲು ನಿಲ್ದಾಣದ ಮುಂಭಾಗದಲ್ಲಿ ಭಾರತದ ರಾಷ್ಟ್ರ ಧ್ವಜ ಹಾರಾಡುತ್ತಿದ್ದು, ಭಾರತೀಯ ರೈಲ್ವೆ ಇಲಾಖೆ, ದೇಶದ ರೈಲ್ವೆ ಸೇವೆಗಳನ್ನು ಪ್ರಯಾಣಿಕ ಸ್ನೇಹಿಯನ್ನಾಗಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.