ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ, 2021 (ಜಿಎನ್ಸಿಟಿಡಿ) ಯನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.
ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಕಾಂಗ್ರೆಸ್ ಸದಸ್ಯರು ವಿರೋಧ ಪಕ್ಷದ ಅನೇಕ ನಾಯಕರೊಂದಿಗೆಮಸೂದೆ ವಿರುದ್ಧ ಘೋಷಣೆಗಳನ್ನು ಎತ್ತಿದರು.
ಇದಕ್ಕೂ ಮುನ್ನ ದೆಹಲಿ ವಿಧಾನಸಭೆಗೆ ವಿರುದ್ಧವಾಗಿ ಲೆಫ್ಟಿನೆಂಟ್ ಗವರ್ನರ್ಗೆ ಹೆಚ್ಚಿನ ಸಾಂವಿಧಾನಿಕ ಅಧಿಕಾರವನ್ನು ನೀಡುವ ಮಸೂದೆಯನ್ನು ಲೋಕಸಭೆಯು ಸೋಮವಾರ ಅಂಗೀಕರಿಸಿತು.
ಈ ಮಸೂದೆ ಅನ್ವಯ ಯಾವುದೇ ಕಾರ್ಯಕಾರಿ ಕ್ರಮ ಕೈಗೊಳ್ಳುವ ಮೊದಲು ದೆಹಲಿ ಸರ್ಕಾರವು ಎಲ್-ಜಿ ಅಭಿಪ್ರಾಯವನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ.
ಹೊಸ ಮಸೂದೆ ಕುರಿತಾದ ಚರ್ಚೆಗಳು ಮೇಲ್ಮನೆಯಲ್ಲಿ ಬುಧವಾರ ಹಲವಾರು ಬಾರಿ ಬಿಸಿ ವಾದಗಳಿಗೆ ಎಡೆಮಾಡಿಕೊಟ್ಟಿತು.
ಮಸೂದೆ ಅಂಗೀಕಾರವಾದ ಕೂಡಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದು ಪ್ರಜಾಪ್ರಭುತ್ವಕ್ಕೆ “ದುಃಖದ ದಿನ” ಎಂದು ಹೇಳಿದರು ಮತ್ತು ಜನರಿಗೆ ಅಧಿಕಾರವನ್ನು ಪುನಃಸ್ಥಾಪಿಸುವ ಅವರ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.
ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸದಸ್ಯರು ಶಾಸನದ ವಿರುದ್ಧ ಘೋಷಣೆಗಳನ್ನು ಎತ್ತಿದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.