ನವದೆಹಲಿ: ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಸುಹ್ ವೂಕ್ ಅವರು ಇಂದಿನಿಂದ ಮೂರು ದಿನಗಳ ಕಾಲ ಭಾರತ ಭೇಟಿಯಲ್ಲಿ ಇರಲಿದ್ದಾರೆ. ದ್ವಿಪಕ್ಷೀಯ ರಕ್ಷಣಾ ಮತ್ತು ಮಿಲಿಟರಿ ಸಹಕಾರವನ್ನು ಹೆಚ್ಚಿಸುವ ಉದ್ದೇಶವನ್ನು ಅವರ ಭೇಟಿ ಹೊಂದಿದೆ.
ಭೇಟಿಯ ವೇಳೆ, ಅವರು ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಭಾರತ-ಕೊರಿಯಾ ರಕ್ಷಣಾ ಸಹಕಾರ ಮತ್ತು ಪರಸ್ಪರ ಆಸಕ್ತಿಯ ಇತರ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.
ಇಂಡೋ-ಕೊರಿಯನ್ ಸ್ನೇಹ ಉದ್ಯಾನವನವನ್ನು ಕೂಡ ಈ ಸಂದರ್ಭದಲ್ಲಿ ದೆಹಲಿ ಕಾಂಟ್ನಲ್ಲಿ ಜಂಟಿಯಾಗಿದೆ ಉದ್ಘಾಟಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಸುಹ್ ವೂಕ್ ಭೇಟಿಯ ಸಮಯದಲ್ಲಿ ಆಗ್ರಾಗೂ ಪ್ರಯಾಣಿಸಲಿದ್ದಾರೆ. ದೆಹಲಿಯಲ್ಲಿ, ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಭಾರತದ ಹುತಾತ್ಮ ವೀರರಿಗೆ ಗೌರವ ಸಲ್ಲಿಸಲಿದ್ದಾರೆ.
ದಕ್ಷಿಣ ಕೊರಿಯಾ ಭಾರತಕ್ಕೆ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳ ಪ್ರಮುಖ ಪೂರೈಕೆದಾರ. 2019 ರಲ್ಲಿ ಉಭಯ ದೇಶಗಳು ವಿವಿಧ ಭೂ ಮತ್ತು ನೌಕಾ ವ್ಯವಸ್ಥೆಗಳ ಜಂಟಿ ಉತ್ಪಾದನೆಯಲ್ಲಿ ಸಹಕಾರವನ್ನು ಅಂತಿಮಗೊಳಿಸಿದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.