ಮೈಸೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರಿಯುತ್ತಾ ಸಾಗಿದಲ್ಲಿ ದೇವಾಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ತಿಳಿಸಿದರು.
ಮೈಸೂರಿನ ಸುಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು, ರಾಜ್ಯದ ವಿವಿಧ ಪ್ರದೇಶಗಳ ದೇವಸ್ಥಾನಗಳಲ್ಲಿ ಬಹಳ ವಿಜೃಂಭಣೆಯಿಂದ ನಡೆಯುವ ಧಾರ್ಮಿಕ ಆಚರಣೆಗಳಲ್ಲಿ ಕೋವಿಡ್ ಸೂತ್ರಗಳನ್ನು ಅಳವಡಿಸುವುದು ಸೂಕ್ತವಾಗಿದೆ. ಅದಾಗ್ಯೂ ಕೊರೋನಾ ಪ್ರಕರಣಗಳು ಹೆಚ್ಚು ಕಂಡು ಬಂದಲ್ಲಿ ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನಗಳಿಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ಮುಂಜಾಗ್ರತಾ ಕ್ರಮಗಳನ್ನೂ ರಾಜ್ಯ ಸರ್ಕಾರ ಪ್ರಕಟಿಸಿದೆ. ಕೊರೋನಾ ನಿಯಂತ್ರಣ ನಿಯಮಗಳನ್ನು ಪಾಲಿಸುವಂತೆಯೂ ಕಡ್ಡಾಯಗೊಳಿಸಲಾಗಿದೆ. ಹಬ್ಬ ಹರಿದಿನಗಳನ್ನು ಸಾರ್ವಜನಿಕವಾಗಿ ಆಚರಣೆ ಮಾಡದಂತೆಯೂ ಸರ್ಕಾರ ನಿರ್ಬಂಧ ಹೇರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.