ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಇಂದು ಬಾಂಗ್ಲಾದೇಶಕ್ಕೆ ಆಗಮಿಸಿದ ಕೂಡಲೇ ಅವರು ಅಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ(ಜತಿಯೋ ಶ್ರಿತಿ ಸೌಧೋ) ಭೇಟಿ ನೀಡಿದರು.
1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಬಲಿದಾನಗೈಯ್ದ ಯೋಧರ ಶೌರ್ಯ ಮತ್ತು ತ್ಯಾಗದ ಪ್ರತೀಕವಾಗಿ ನಿರ್ಮಿಸಿರುವ ಬಾಂಗ್ಲಾದೇಶದ ರಾಷ್ಟ್ರೀಯ ಸ್ಮಾರಕ ಇದಾಗಿದ್ದು, ಅಲ್ಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. ಈ ಸ್ಮಾರಕ ಢಾಕಾದಿಂದ ವಾಯುವ್ಯಕ್ಕೆ 35 ಕಿ.ಮೀ. ದೂರದಲ್ಲಿರುವ ಸಾವರ್ ನಲ್ಲಿದ್ದು, ಇದನ್ನು ಸೈಯದ್ ಮೈನುಲ್ ಹೊಸೈನ್ ವಿನ್ಯಾಸಗೊಳಿಸಿದ್ದಾರೆ.
ಪ್ರಧಾನಮಂತ್ರಿ ಅವರು ಸ್ಮಾರಕ ಸ್ಥಳದಲ್ಲಿ ಅರ್ಜುನ ಮರದ ಸಸಿಯನ್ನು ನೆಟ್ಟರು ಮತ್ತು ಸ್ಮಾರಕದ ಅತಿಥಿಗಳ ಪುಸ್ತಕದಲ್ಲಿ ಸಹಿ ಹಾಕಿದರು. ಅವರು “ವಂಚನೆ ಮತ್ತು ದಬ್ಬಾಳಿಕೆಯ ವಿರುದ್ಧ ಸತ್ಯ ಮತ್ತು ಶೌರ್ಯದ ಉದಾತ್ತ ಗೆಲುವಿನ ಸಂಕೇತವಾಗಿ ಸಾವರ್ ನಲ್ಲಿನ ಜ್ಯೋತಿ ಸದಾ ಉರಿಯುತ್ತಿರಲೆಂದು ಆಶಿಸುತ್ತೇನೆ’’ ಎಂದು ಪುಸ್ತಕದಲ್ಲಿ ಬರೆದಿದ್ದಾರೆ.
ಮೋದಿ ಅವರು ಢಾಕಾದಲ್ಲಿ ಬಂದಿಳಿಯುತ್ತಿದ್ದಂತೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಢಾಕಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸ್ವಾಗತಿಸಿದರು. ಢಾಕಾ ವಿಮಾನ ನಿಲ್ದಾಣದಲ್ಲಿ ಅವರಿಗೆ ಗೌರವ ನೀಡಲಾಯಿತು. ಈ ಸಂದರ್ಭದಲ್ಲಿ ಭಾರತೀಯ ರಾಷ್ಟ್ರಗೀತೆ ಸಹ ನುಡಿಸಲಾಯಿತು.
ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ಮತ್ತಷ್ಟು ದ್ವಿಪಕ್ಷೀಯ ಸಂಬಂಧಗಳಿಗೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಅದ್ಧೂರಿ ಸ್ವಾಗತಕ್ಕಾಗಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.