ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಕೊರೋನಾ ಮಾರ್ಗಸೂಚಿಯನ್ನು ಹೊರಡಿಸಿದ್ದು, ಮನೆ ಮನೆ ಪ್ರಚಾರ ಸಂದರ್ಭದಲ್ಲಿ ಕೇವಲ 5 ಮಂದಿಗಷ್ಟೇ ಅವಕಾಶ ನೀಡಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಪ್ರಚಾರ ಸಂದರ್ಭ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಮಾಡುವುದು ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದೆ. ಸಿಬ್ಬಂದಿ ಮತ್ತು ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅಭ್ಯರ್ಥಿ ಜೊತೆಗೆ ಇಬ್ಬರಿಗೆ ಅವಕಾಶ ಇದೆ. ಎರಡು ವಾಹನಗಳಿಗೆ ಅನುಮತಿ ನೀಡಲಾಗಿದೆ. ನಾಮಪತ್ರದ ಫಾರಂ ಡೌನ್ಲೋಡ್, ಅಫಿಡವಿಟ್, ಭದ್ರತಾ ಠೇವಣಿ ಮುಂತಾದವುಗಳನ್ನು ಆನ್ಲೈನ್ ಮೂಲಕವೇ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಕೊರೋನಾ ಪೀಡಿತರು ಪಿಪಿಇ ಕಿಟ್ ಧರಿಸಿ ನಿಗದಿತ ಆಂಬ್ಯುಲೆನ್ಸ್ ಮೂಲಕ ಬಂದು ಮತದಾನ ಮಾಡುವಂತೆ ಸರ್ಕಾರ ತಿಳಿಸಿದೆ.
ಈ ಬಾರಿ ಕೊರೋನಾ ಕಾರಣದಿಂದ 1500 ಜನರ ಬದಲಾಗಿ 1000 ಜನರಿಗೆ ಒಂದು ಮತಗಟ್ಟೆ ಸ್ಥಾಪಿಸುವಂತೆಯೂ ಆರೋಗ್ಯ ಇಲಾಖೆ ಸೂಚಿಸಿದೆ. ಪ್ರಚಾರ ಸಂದರ್ಭದಲ್ಲಿ ಕೊರೋನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.