ಹೈದರಾಬಾದ್: ತಿರುಪತಿ ಲೋಕಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಗೆ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ (ಸಿ.ಎಸ್) ಕೆ ರತ್ನ ಪ್ರಭಾ ಅವರು ಬಿಜೆಪಿಯಿಂದ ಕಣಕ್ಕೆ ಇಳಿಯುತ್ತಿದ್ದಾರೆ, ಈಗಾಗಲೇ ಟಿಕೆಟ್ ಪಡೆದುಕೊಂಡಿದ್ದಾರೆ.
ರತ್ನ ಪ್ರಭಾ ಕರ್ನಾಟಕದ ಮೂರನೇ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿದ್ದರು. ಪ್ರಸ್ತುತ ಅವರು ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದು, 37 ವರ್ಷಗಳ ಕಾಲ ರಾಜ್ಯದಲ್ಲಿ ಸೇವೆ ಸಲ್ಲಿಸಿದ ನಂತರ 2019 ರಲ್ಲಿ ಬಿಜೆಪಿಗೆ ಸೇರಿದರು. ಅವರ ತಂದೆ ಕೆ ಚಂದ್ರಯ್ಯ, ಅವರ ಪತಿ ವಿದ್ಯಾ ಸಾಗರ್ ಮತ್ತು ಸಹೋದರ ಪ್ರದೀಪ್ ಚಂದ್ರ ಕೂಡ ಎಪಿ ಕೇಡರ್ ಐಎಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಗುರುವಾರ ಪ್ರಭಾ ಅವರು ಟ್ವೀಟ್ ಮೂಲಕ ಉಮೇದುವಾರಿಕೆಗಾಗಿ ಸಂತೋಷ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
“ತಿರುಪತಿ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಅವಕಾಶ ನೀಡಿದ ನಮ್ಮ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ಸಂತೋಷ್, ಸೋಮ್ ವೀರಜು ಸುನಿಲ್ ದಿಯೋಧರ್ಜಿ ಮತ್ತು ಪವನ್ ಕಲ್ಯಾಣ್ ಅವರಿಗೆ ನನ್ನ ಕೃತಜ್ಞತೆ ಮತ್ತು ಧನ್ಯವಾದಗಳು. ನಾನು ಅತ್ಯುತ್ತಮ ಪ್ರಯತ್ನ ನಡೆಸುತ್ತೇನೆ” ಎಂದಿದ್ದಾರೆ.
“ತಿರುಪತಿ ಅತ್ಯಂತ ಪವಿತ್ರ ಮತ್ತು ದೈವಿಕ ಶಕ್ತಿ ಇಲ್ಲಿದೆ. ನಾನು ಅಲ್ಲಿನ ಜನರಿಗೆ ಸೇವೆ ಸಲ್ಲಿಸುವುದು ದೇವರ ಚಿತ್ತವಾಗಿದೆ. ಈ ಹಠಾತ್ ಆಶ್ಚರ್ಯಕ್ಕಾಗಿ ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕತ್ವಕ್ಕೆ ಧನ್ಯವಾದಗಳು..ಇದು ಕನಸಲ್ಲ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.