ಬೆಂಗಳೂರು: ದೇಶದಾದ್ಯಂತ ಇಂದು ಹೋಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ಮೋದಿ ಸೇರಿದಂತೆ ಇನ್ನೂ ಅನೇಕ ಗಣ್ಯರು ಜನತೆಗೆ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೂ ಜನತೆಗೆ ಹೋಳಿ ಹಬ್ಬದ ಶುಭಾಶಯಗಳನ್ನು ತಿಳಿಸಿ ಟ್ವೀಟ್ ಮಾಡಿದ್ದಾರೆ.
ಸಾಂಕ್ರಾಮಿಕ ಸಂಕಷ್ಟಗಳೆಲ್ಲವೂ ಮರೆಯಾಗಲಿ. ಆರೋಗ್ಯ, ಸಂತಸ, ಸಮೃದ್ಧಿ, ಸಂಭ್ರಮದ ಬಣ್ಣಗಳು ಜನರ ಜೀವನದಲ್ಲಿ ತುಂಬಿರಲಿ. ಈ ಸಂದರ್ಭದಲ್ಲಿ ಕೊರೋನಾ ಬಗ್ಗೆನಿರ್ಲಕ್ಷ್ಯ ಬೇಡ. ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಹಬ್ಬಗಳನ್ನು ಆಚರಿಸೋಣ. ಸುರಕ್ಷಿತರಾಗಿರೋಣ ಎಂಬ ಸಂದೇಶವನ್ನು ಸಿಎಂ ಯಡಿಯೂರಪ್ಪ ನಾಡಿನ ಜನತೆಗೆ ರವಾನಿಸಿದ್ದಾರೆ.
ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಶುಭಾಶಯಗಳು. ಸಾಂಕ್ರಾಮಿಕದ ಸಂಕಷ್ಟಗಳೆಲ್ಲವೂ ದೂರ ಸರಿಯಲಿ, ಆರೋಗ್ಯ, ಸಂತಸ, ಸಮೃದ್ಧಿ, ಸಂಭ್ರಮದ ಬಣ್ಣಗಳು ಜನರ ಜೀವನದಲ್ಲಿ ಸದಾ ತುಂಬಿರಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ನಿರ್ಲಕ್ಷಿಸಬೇಡಿ, ನಿಮ್ಮ,ನಿಮ್ಮ ಕುಟುಂಬದ ಸುರಕ್ಷತೆಗಾಗಿ ಎಲ್ಲ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ, ಸರಳವಾಗಿ ಹಬ್ಬ ಆಚರಿಸಿ pic.twitter.com/kIrVgoVnQr
— B.S. Yediyurappa (@BSYBJP) March 29, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.