ಬೆಂಗಳೂರು: ರಾಜಯದ ಸಾರಿಗೆ ನೌಕರರು ಸರ್ಕಾರದ ಮುಂದೆ ಇರಿಸಿರುವ 10 ಬೇಡಿಕೆಗಳಲ್ಲಿ ಒಂಬತ್ತು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪೂರಕ ಕೆಲಸಗಳನ್ನು ಸರ್ಕಾರ ಕೈಗೊಂಡಿದೆ ಎಂದು ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಬೇಡಿಕೆಯೊಂದನ್ನು ಹೊರತುಪಡಿಸಿದಂತೆ ಈಗಾಗಲೇ 9 ಬೇಡಿಕೆಗಳನ್ನು ಈಡೇರಿಸಲಾಗಿದೆ. ಅಂತರ್ ನಿಗಮ ವರ್ಗಾವಣೆ, ಟಿಎ ಹೆಚ್ಚಳದ ಬೇಡಿಕೆಯನ್ನೂ ಈಡೇರಿಸಲಾಗಿದೆ. ಆರನೇ ಪೇ ಕಮಿಷನ್ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಆರ್ಥಿಕ ಇಲಾಖೆ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ಸಾರಿಗೆ ಇಲಾಖೆಯ ನೌಕರರಿಗೆ ನೀಡಿದ ಭರವಸೆಯನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತದೆ. ಬಡ ಮತ್ತು ಮಧ್ಯಮ ವರ್ಗಗಳು ಹೆಚ್ಚಾಗಿ ಬಳಕೆ ಮಅಡುವ ಸಾರಿಗೆ ವಾಹನಗಳ ನೌಕರರು ಪ್ರತಿಭಟನೆಯ ಹಾದಿ ತುಳಿದು ಅವರಿಗೆ ಅನಾನುಕೂಲವನ್ನು ಮಾಡಬಾರದು ಎಂದು ಅವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.