ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆಯ ಕಾಮಗಾರಿ ಅವಧಿಗಿಂತಲೂ ಮುಂಚಿತವಾಗಿಯೇ ಪೂರ್ಣಗೊಂಡಿದ್ದು, ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಮಾಹಿತಿ ನೀಡಿದೆ.
ಹೊಸಕೋಟೆ – ಶಿವಮೊಗ್ಗ ರಾಜ್ಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆಗೆ ಸ್ಟ್ರಿಪ್ ಸೀಲ್ ಅಳವಡಿಕೆ ಮಾಡುವ ಕಾಮಗಾರಿ ನಿರ್ವಹಿಸುವ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಏಕಮುಖ ಸಂಚಾರ ನಿಯಮವನ್ನು ಜಿಲ್ಲಾಡಳಿತ ಹೇರಿತ್ತು. ಹಾಗೆಯೇ ಒಂದು ತಿಂಗಳೊಳಗಾಗಿ ಈ ಕಾಮಗಾರಿ ಸಂಪೂರ್ಣಗೊಳಿಸಿ ಅದನ್ನು ಸಾರ್ವಜನಿಕರ ಬಳಕೆಗೆ ಮುಕ್ತ ಗೊಳಿಸುವಂತೆಯೂ ಸೂಚಿಸಲಾಗಿತ್ತು.
ಇದೀಗ ಈ ಕಾಮಗಾರಿಯನ್ನು ಅವಧಿಗೂ ಮೊದಲೇ ಸಂಪೂರ್ಣ ಮಾಡಲಾಗಿದೆ. 21 ದಿನಗಳಲ್ಲೇ ಈ ಎಲ್ಲಾ ದುರಸ್ತಿ ಕಾಮಗಾರಿಗಳೂ ಸಂಪೂರ್ಣಗೊಂಡಿದ್ದು, ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.