ಬೆಂಗಳೂರು: ರಾಜ್ಯದ ಕೆಲವು ಹಿಂದುಳಿದ ಜಿಲ್ಲೆಗಳಲ್ಲಿ ಎಪ್ರಿಲ್ 2 ರಿಂದ ಆರಂಭವಾಗುವಂತೆ ಕೇಂದ್ರ ಸರ್ಕಾರದ ʼಓದು-ಬರಹʼ ಅಭಿಯಾನದಡಿಯಲ್ಲಿ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ರಾಜ್ಯದ ಚಾಮರಾಜನಗರ, ರಾಯಚೂರು, ಯಾದಗಿರಿ, ಕಲ್ಬುರ್ಗಿ ಮತ್ತು ವಿಜಯಪುರ ಸೇರಿದಂತೆ 3 ಸಾವಿರ ಲಕ್ಷ ವಯಸ್ಕರಿಗೆ ಶಿಕ್ಷಣ ನೀಡಲು ಮುಂದಾಗಿದೆ. ದೇಶದಲ್ಲಿ 80 ಸಾವಿರ ಪುರುಷರು ಸೇರಿದಂತೆ 3.2 ಲಕ್ಷ ವಯಸ್ಕರಿಗೆ ಶಿಕ್ಷಣ ನೀಡುವ ಕನಸಿನೊಂದಿಗೆ ಕೇಂದ್ರ ಸರ್ಕಾರ ಈ ಕಾರ್ಯಕ್ರಮ ನಡೆಸುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಅನಕ್ಷರಸ್ಥರ ಸಂಖ್ಯೆ ಕಡಿಮೆ ಮಾಡುವ, ಹಿಂದುಳಿದ ಜಿಲ್ಲೆಗಳ ಶಿಕ್ಷಣ ವಂಚಿತರಿಗೆ ಶಿಕ್ಷಣ ನೀಡುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಸರ್ಕಾರ ನಡೆಸುತ್ತಿದೆ. 15 – 50 ವರ್ಷದ ವರೆಗಿನ ಜನರನ್ನು ಸಾಕ್ಷರರನ್ನಾಗಿಸುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ ಎಂದು ಸುರೇಶ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.