News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕಿಸ್ಥಾನ ಭಾರತದೊಂದಿಗೆ ಶಾಂತಿ ಸಂಬಂಧ ಬಯಸುತ್ತದೆ: ಮೋದಿಗೆ ಇಮ್ರಾನ್‌ ಪತ್ರ

ನವದೆಹಲಿ: ಪಾಕಿಸ್ಥಾನ ಮತ್ತು ಭಾರತದ ನಡುವಿನ ಬಾಕಿ ಇರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ರಚನಾತ್ಮಕ ಮತ್ತು ಫಲಿತಾಂಶ ಆಧಾರಿತ ಸಂವಾದಕ್ಕೆ “ಶಕ್ತಗೊಳಿಸುವ ವಾತಾವರಣ” ಸೃಷ್ಟಿಸುವುದು ಕಡ್ಡಾಯವಾಗಿದೆ ಎಂದು ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪಾಕಿಸ್ಥಾನ ರಾಷ್ಟ್ರೀಯ ದಿನದಂದು ಶುಭಾಶಯ ಕೋರಲು ಕಳೆದ ವಾರ ಪ್ರಧಾನಿ ಮೋದಿ ಅವರು ಬರೆದ ಪತ್ರಕ್ಕೆ ಖಾನ್ ಅವರು ಸ್ಪಂದನೆಯಾಗಿ ಮರು ಪತ್ರ ಬರೆದಿದ್ದಾರೆ.

ಭಾರತವು ಪಾಕಿಸ್ಥಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆ ಮತ್ತು ಹಗೆತನವಿಲ್ಲದ ವಿಶ್ವಾಸದ ವಾತಾವರಣವು ಅದಕ್ಕೆ ಅತ್ಯಗತ್ಯ ಎಂದು ಪ್ರಧಾನಿ ಮೋದಿ ತಮ್ಮ ಪತ್ರದಲ್ಲಿ ತಿಳಿಸಿದ್ದರು.

ಪ್ರಧಾನಿ ಮೋದಿ ಅವರ ಪತ್ರಕ್ಕೆ ಉತ್ತರವಾಗಿ ಪಾತ್ರ ಬರೆದಿರುವ ಖಾನ್, ಮೊದಲು ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. “ಪಾಕಿಸ್ಥಾನದ ಜನರು ಭಾರತ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಶಾಂತಿಯುತ ಸಹಕಾರ ಸಂಬಂಧವನ್ನು ಬಯಸುತ್ತಾರೆ” ಎಂದು ಹೇಳಿದ್ದಾರೆ.

“ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯು ಭಾರತ ಮತ್ತು ಪಾಕಿಸ್ಥಾನದ ನಡುವಿನ ಬಾಕಿ ಇರುವ ಎಲ್ಲಾ ಸಮಸ್ಯೆಗಳನ್ನು ನಿರ್ದಿಷ್ಟವಾಗಿ ಜಮ್ಮು ಮತ್ತು ಕಾಶ್ಮೀರ ವಿವಾದವನ್ನು ಬಗೆಹರಿಸುವಲ್ಲಿ ನಿಶ್ಚಿತವಾಗಿದೆ ಎಂದು ನಮಗೆ ಮನವರಿಕೆಯಾಗಿದೆ” ಎಂದಿದ್ದಾರೆ.

ರಚನಾತ್ಮಕ ಮತ್ತು ಫಲಿತಾಂಶ-ಆಧಾರಿತ ಸಂವಾದಕ್ಕೆ “ಪರಿಸರವನ್ನು ಸಕ್ರಿಯಗೊಳಿಸುವುದು ಕಡ್ಡಾಯವಾಗಿದೆ” ಎಂದಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಅವರು ಭಾರತದ ಜನರಿಗೆ ಶುಭ ಹಾರೈಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top