ನವದೆಹಲಿ: ಸಣ್ಣ ಉಳಿತಾಯದ ಮೇಲಿನ ಬಡ್ಡಿದರಗಳನ್ನು ಕಡಿತ ಮಾಡುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಗುರುವಾರ ಹಿಂದಕ್ಕೆ ಪಡೆದುಕೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಇದಕ್ಕೂ ಮುನ್ನ ಬುಧವಾರ ಸಣ್ಣ ಉಳಿತಾಯದ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸುವ ಮೂಲಕ ಸರ್ಕಾರ ಸಾಮಾನ್ಯ ಜನರಿಗೆ ದೊಡ್ಡ ಆಘಾತ ನೀಡಿತ್ತು. ಬ್ಯಾಂಕ್ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ 1.1ರಷ್ಟು ಕಡಿತ ಮಾಡಲಾಗುವುದು ಎಂದಿತ್ತು.
ಕೊನೆಗೂ ಈ ನಿರ್ಧಾರವನ್ನು ಸರ್ಕಾರ ವಾಪಾಸ್ ಪಡೆದುಕೊಂಡಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ನಿರ್ಮಲಾ ಸೀತಾರಾಮನ್, “ಭಾರತ ಸರಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2020-21ರ ನಾಲ್ಕನೇ ತ್ರೈಮಾಸಿಕದಲ್ಲಿ, ಅಂದರೆ 2021ರ ಮಾರ್ಚ್ ವರೆಗೆ ಇದ್ದ ದರಗಳು ಮುಂದುವರಿಯಲಿವೆ” ಎಂದಿದ್ದಾರೆ.
ಬಡ್ಡಿ ತರಹ ಪರಿಷ್ಕೃತಗೊಳಿಸಿ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಪಿಪಿಎಫ್ ಮೇಲಿನ ಬಡ್ಡಿದರವನ್ನು ಕೇಂದ್ರ ಸರ್ಕಾರ ಶೇಕಡಾ 0.7ರಿಂದ 6.4ರವರೆಗೆ, ಎನ್ ಎಸ್ ಸಿಯ ಬಡ್ಡಿದರವನ್ನು ಶೇಕಡಾ 0.9ರಿಂದ ಶೇಕಡಾ 5.9ರವರೆಗೆ ಕಡಿತ ಮಾಡಲಾಗಿತ್ತು. ಇದೀಗ ಈ ಆದೇಶವನ್ನು ಹಿಂಪಡೆಯಲಾಗಿದೆ.
Interest rates of small savings schemes of GoI shall continue to be at the rates which existed in the last quarter of 2020-2021, ie, rates that prevailed as of March 2021.
Orders issued by oversight shall be withdrawn. @FinMinIndia @PIB_India— Nirmala Sitharaman (@nsitharaman) April 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.