ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಸೀದಿಯೊಂದರಲ್ಲಿ ಇಂದು ಮುಂಜಾನೆ ೬.೩೦ರ ಸುಮಾರಿಗೆ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ 10 ಮಂದಿ ಗಾಯಗೊಂಡಿದ್ದಾರೆ.
ನಮಾಜ್ ಮುಗಿಸಿ ಹಿಂದಿರುಗುವ ಸಂದರ್ಭ ಮಸೀದಿಯ ಹಾಲ್ ಸಮೀಪ ಲೋಟವೊಂದನ್ನು ಗಮನಿಸಿದ ವ್ಯಕ್ತಿಯೋರ್ವ ಅದನ್ನು ಅಲ್ಲಿಂದ ತೆಗೆಯಲು ಮುಂದಾಗಿದ್ದಾನೆ. ಈ ಸಂದರ್ಭ ತಲೆಕೆಳಗಾಗಿದ್ದ ಲೋಟದಲ್ಲಿ ಇರಿಸಲಾಗಿದ್ದ ಗ್ರೆನೇಡ್ ಸ್ಪೋಟಗೊಂಡು ಈ ಘಟನೆ ಸಂಭವಿಸಿದೆ ಎಂದು ಅಲ್ಲಿಯ ಹಿರಿಯ ಪೊಲೀಸ್ ಅಧಿಆರಿಯೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.