ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ಶುಕ್ರವಾರ ಮುಖ್ಯ ಕಾರ್ಯದರ್ಶಿಗಳು, ಡಿಜಿ ಪೊಲೀಸ್ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ.
ಈ ಸಭೆಯನ್ನು 11 ರಾಜ್ಯಗಳು / ಕೇಂದ್ರಾಡಳಿ ಪ್ರದೇಶಗಳನ್ನು ಕೇಂದ್ರೀಕರಿಸಿ ನಡೆಸಲಾಗಿದೆ. ಕಳೆದ ಎರಡು ವಾರಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳು ಮತ್ತು ದೈನಂದಿನ ಮರಣಗಳು ಇಲ್ಲಿ ಏರಿಕೆಯಾಗಿವೆ.
ಈ ರಾಜ್ಯಗಳ ಪ್ರಸ್ತುತ ಕೋವಿಡ್ ಸನ್ನಿವೇಶವು ಆತಂಕಕಾರಿಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಹದಿನೈದು ದಿನಗಳಿಂದ ಕೋವಿಡ್ ಸನ್ನಿವೇಶವು ನಿರಂತರವಾಗಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡರೆ, 2021 ರ ಮಾರ್ಚ್ನಲ್ಲಿ ಪ್ರಸ್ತುತ ಕೋವಿಡ್ ಪ್ರಕರಣದ ಬೆಳವಣಿಗೆಯ ದರವು ಶೇಕಡಾ 6.8 ರಷ್ಟಿದ್ದು, ಹಿಂದಿನ ದಾಖಲೆಯಾದ ಶೇ 5.5 ರಷ್ಟ (ಜೂನ್ 2020 )ನ್ನು ಮೀರಿದೆ ಎಂದು ಗೌಬಾ ತಿಳಿಸಿದ್ದಾರೆ.
ಈ ಅವಧಿಯಲ್ಲಿ ದೈನಂದಿನ ಕೋವಿಡ್ ಸಾವುಗಳು ಶೇ 5.5 ರಷ್ಟು ಬೆಳವಣಿಗೆಯ ದರವನ್ನು ವರದಿ ಮಾಡಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ದೇಶವು ಈಗ 81,000 ಹೊಸ ಹೊಸ ಪ್ರಕರಣಗಳನ್ನು ದಾಖಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.