ನವದೆಹಲಿ: ಭಾರತವು ಹವಾಮಾನ ಬಿಕ್ಕಟ್ಟು ಪರಿಹಾರದ ನಿರ್ಣಾಯಕ ಭಾಗವಾಗಿದೆ ಎಂದು ಅಮೆರಿಕಾ ಹೇಳಿದೆ. ಯುಎಸ್ನ ಹವಾಮಾನ ವಿಶೇಷ ರಾಯಭಾರಿ ಜಾನ್ ಕೆರ್ರಿ ಅವರ ನವದೆಹಲಿ ಭೇಟಿಗೂ ಮುಂಚಿತವಾಗಿ ಅಮೆರಿಕ ಈ ಹೇಳಿಕೆ ನೀಡಿದೆ.
ಜಾನ್ ಕೆರ್ರಿ ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದು, ಈ ಸಂದರ್ಭದಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರೊಂದಿಗೂ ಮಾತುಕತೆ ನಡೆಸಲಿದ್ದಾರೆ.
ನವದೆಹಲಿಯ ಯುಎಸ್ ರಾಯಭಾರ ಕಚೇರಿಯ ವಕ್ತಾರರು ಈ ಬಗ್ಗೆ ಪ್ರತಿಕ್ರಿಯೆ ನೀಡಿ “ನವದೆಹಲಿಯಲ್ಲಿ, ಅಮೆರಿಕ ಅಧ್ಯಕ್ಷರ ವಿಶೇಷ ಹವಾಮಾನ ರಾಯಭಾರಿ ಕೆರ್ರಿ ಅವರು ಭಾರತ ಸರ್ಕಾರ, ಖಾಸಗಿ ವಲಯ ಮತ್ತು ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಲಿದ್ದಾರೆ” ಎಂದು ಹೇಳಿದ್ದಾರೆ.
ಯುಎಸ್ ರಾಯಭಾರ ಕಚೇರಿ ತನ್ನ ಹೇಳಿಕೆಯಲ್ಲಿ, “ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಿ ಮತ್ತು ವಿಜ್ಞಾನ ಮತ್ತು ನಾವೀನ್ಯತೆಗಳಲ್ಲಿ ಜಾಗತಿಕ ನಾಯಕರಾಗಿ, ಹವಾಮಾನ ಬಿಕ್ಕಟ್ಟಿನ ಪರಿಹಾರದ ಒಂದು ನಿರ್ಣಾಯಕ ಭಾಗವಾಗಿದೆ. ಭವಿಷ್ಯದ ಶುದ್ಧ ಇಂಧನ ಸಂಶೋಧನೆ, ಅಭಿವೃದ್ಧಿ ಮತ್ತು ನಿಯೋಜನೆಯಲ್ಲಿ ಭಾರತವನ್ನು ನಾವು ಪ್ರಮುಖ ಪಾಲುದಾರರಾಗಿ ನೋಡುತ್ತೇವೆ” ಎಂದಿದೆ.
ಈ ಭೇಟಿ ಏಪ್ರಿಲ್ 22 ರಿಂದ 23 ರವರೆಗೆ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರ ಹವಾಮಾನ ಶೃಂಗಸಭೆ ಮತ್ತು ನವೆಂಬರ್ನಲ್ಲಿ ಯುನೈಟೆಡ್ ನೇಷನ್ಸ್ ಫ್ರೇಮ್ವರ್ಕ್ ಕನ್ವೆನ್ಷನ್ ಆನ್ ಕ್ಲೈಮೇಟ್ ಚೇಂಜ್ (ಯುಎನ್ಎಫ್ಸಿಸಿ) ಗೆ 26 ನೇ ಕಾನ್ಫರೆನ್ಸ್ (ಸಿಒಪಿ 26) ಮುಂಚಿತವಾಗಿ ನಡೆದಿದೆ. ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಹವಾಮಾನ ಶೃಂಗಸಭೆಗೆ ಭಾರತವನ್ನು ಅಮೆರಿಕ ಆಹ್ವಾನಿಸಿದೆ. ಕಳೆದ ತಿಂಗಳು ನಡೆದ ಕ್ವಾಡ್ ಸಭೆಯ ನಂತರ ಇದು ಎರಡನೇ ಬಾರಿಗೆ ಪ್ರಧಾನಿ ಮೋದಿ ಮತ್ತು ಯುಎಸ್ ಅಧ್ಯಕ್ಷ ಬೈಡೆನ್ ವರ್ಚುವಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.