ನವದೆಹಲಿ: ಛತ್ತೀಸ್ಗಢದಲ್ಲಿ ನಡೆದ ಅಮಾನವೀಯ ನಕ್ಸಲ್ ದಾಳಿಯ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ
ಛತ್ತೀಸ್ಗಢದ ನಕ್ಸಲ್ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ಪರಿಸ್ಥಿತಿ ಪರಿಶೀಲಿಸಲು ಹಿರಿಯ ಅಧಿಕಾರಿಗಳೊಂದಿಗೆ ನವದೆಹಲಿಯಲ್ಲಿ ಈ ಉನ್ನತ ಮಟ್ಟದ ಸಭೆ ನಡೆಸಲಾಗಿದೆ ಎಂದು ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ವಿಭಾಗದ ನಿರ್ದೇಶಕ ಅರವಿಂದ್ ಕುಮಾರ್ ಮತ್ತು ಹಿರಿಯ ಸಿಆರ್ಪಿಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಶಾ ಅವರು ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಿದರು. ದೇಶಕ್ಕಾಗಿ ಯೋಧರು ಮಾಡಿದ ತ್ಯಾಗಗಳು ವ್ಯರ್ಥವಾಗುವುದಿಲ್ಲ ಎಂದು ಅವರು ಹುತಾತ್ಮರ ಕುಟುಂಬಗಳಿಗೆ ಮತ್ತು ದೇಶಕ್ಕೆ ಭರವಸೆ ನೀಡಿದರು.
ನಕ್ಸಲಿಸಂ ವಿರುದ್ಧದ ಹೋರಾಟ ತೀವ್ರವಾಗಿದೆ ಮತ್ತು ದೃಢವಾಗಿ ಮುಂದುವರಿಯುತ್ತದೆ ಮತ್ತು ಅದನ್ನು ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.
ನಕ್ಸಲ್ ದಾಳಿಯಲ್ಲಿ 23 ಯೋಧರು ಪ್ರಾಣವನ್ನು ಕಳೆದುಕೊಂಡು ಹುತಾತ್ಮರಾಗಿದ್ದಾರೆ. ಘಟನೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.