ನವದೆಹಲಿ: ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದ ಛತ್ತೀಸ್ಗಢಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಭೇಟಿ ನೀಡಲಿದ್ದಾರೆ.
ನಕ್ಸಲರು ಹೊಂಚು ಹಾಕಿ ನಡೆಸಿದ ದಾಳಿಯಲ್ಲಿ 23 ವೀರ ಯೋಧರು ಹುತಾತ್ಮರಾಗಿದ್ದಾರೆ. ರಾಯ್ಪುರದ ವಿವಿಧ ಆಸ್ಪತ್ರೆಗಳಲ್ಲಿ 30 ಕ್ಕೂ ಹೆಚ್ಚು ಯೋಧರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶಕ್ಕೆ ಯಾವುದೇ ಗೃಹ ಸಚಿವರು ನೀಡುವ ಮೊದಲ ಭೇಟಿ ಇದಾಗಿದೆ.
ಗೃಹ ಸಚಿವರು ಅಲ್ಲಿನ ತಳ ಮಟ್ಟದ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಮತ್ತು ರಾಯ್ಪುರದಲ್ಲಿ ಗಾಯಗೊಂಡ ಯೋಧರನ್ನು ಸಹ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಲಿದ್ದಾರೆ. ಅವರು ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ನಕ್ಸಲ್ ಕಮಾಂಡರ್ ಹಿಡ್ಮಾ ಸುಕ್ಮಾ-ಬಿಜಾಪುರ ಪ್ರದೇಶದಲ್ಲಿದ್ದಾನೆ ಎಂದು ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಹಿಡ್ಮಾವನ್ನು ಬೇಟೆಯಾಡಲು ಬೃಹತ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆಯಲ್ಲಿ ಭಾಗಿಯಾದ ತಂಡದ ಮೇಲೆ ದಾಳಿ ನಡೆಸಲು ಸುಮಾರು 400 ನಕ್ಸಲ್ರು ಹೊಂಚು ಹಾಕಿದ್ದರು ಎನ್ನಲಾಗಿದೆ.
ಅವರು ಯೋಧರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ಲೂಟಿ ಮಾಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.